ರಾಜ್ಯ

ಬೈಕ್‌ ಟ್ಯಾಕ್ಸಿ ಸೇವೆಯಿಂದ ಸಂಚಾರ ದಟ್ಟಣೆ, ಅಪಘಾತವೂ ಹೆಚ್ಚು : ವರದಿ

ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸೇವೆ ಅಗತ್ಯತೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರ ಸಾರಿಗೆ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಇದೀಗ ವರದಿ ಸಿದ್ದಪಡಿಸಿರುವ ಸಮಿತಿಯು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿಸುವುದರಿಂದ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದೇ ವರದಿಯನ್ನು ನ್ಯಾಯಲಯಕ್ಕೂ ಸಲ್ಲಿಸಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಳ್ಳಲಾಗಿದೆ.

ಕಳೆದ 2015 ರಿಂದ ಇಲ್ಲಿಯವರೆಗೆ ಬೈಕ್‍ಗಳ ಸಂಖ್ಯೆ ಶೇ.98ರಷ್ಟು ಮತ್ತು ಕಾರುಗಳ ಸಂಖ್ಯೆ ಶೇ.79ರಷ್ಟು ಹೆಚ್ಚಳವಾಗಿದೆ. ಅದೇ ಸಮೂಹ ಸಾರಿಗೆಯಾದ ಬಿಎಂಟಿಸಿ ಬಸ್‍ಗಳ ಸಂಖ್ಯೆ ಕೇವಲ ಶೇ.14ರಷ್ಟು ಮಾತ್ರ ಹೆಚ್ಚಳವಾಗಿದೆ. ಸದ್ಯ ಬೆಂಗಳೂರಿನಲ್ಲಿ 82.83 ಲಕ್ಷ ಬೈಕ್‍ಗಳು, 23.83 ಲಕ್ಷ ಕಾರುಗಳು ಸೇರಿ ಒಟ್ಟು 1.06 ಕೋಟಿ ಬೈಕ್ ಮತ್ತು ಕಾರುಗಳು ಇವೆ.

ಇದನ್ನು ಓದಿ: ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಈಗಾಗಲೇ ವಾಹನಗಳ ಸಂಖ್ಯೆಲ್ಲಿ ಭಾರಿ ಏರಿಕೆಯಾಗಿರುವುದರಿಂದ ಬೈಕ್ ಟ್ಯಾಕ್ಸಿಗಳಿಗೆ ಅನುಮತಿಸಿದರೆ ನಗರದಲ್ಲಿ ಬೈಕ್‍ಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ನಗರದ ಸಂಚಾರ ದಟ್ಟಣೆ ಅಸ್ತವ್ಯಸ್ತಗೊಳ್ಳಲಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಬದಲು ಜನ ಸಮೂಹ ಸಾರಿಗೆಗೆ ಹೆಚ್ಚಳಕ್ಕೆ ಕ್ರಮ ಕೈಗೊಂಡರೆ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ, ಮಾಲಿನ್ಯ ಪ್ರಮಾಣವೂ ಇಳಿಕೆಯಾಗಲಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಬಸ್ ಪ್ರಯಾಣಕ್ಕೆ ಹೋಲಿಸಿದರೆ ಬೈಕ್ ಟ್ಯಾಕ್ಸಿ ಶುಲ್ಕ ದುಬಾರಿಯಾಗುತ್ತದೆ. ಬಿಎಂಟಿಸಿ ಬಸ್‍ನಲ್ಲಿ ಎರಡು ಕಿಮೀಗೆ ಆರು ರೂ. ನೀಡಬೇಕು ಅದೇ ಬೈಕ್ ಟ್ಯಾಕ್ಸಿಯಲ್ಲಿ 48 ರೂ.ಗಳ ದರ ನೀಡಬೇಕಾಗುತ್ತದೆ. ಇದು ಸಹ ಸಾರ್ವಜನಿಕರಿಗೆ ಹೊರೆಯಾಗುವುದು ಗ್ಯಾರಂಟಿ ಎಂದು ವರದಿ ಹೇಳಿದೆ.

ಬೈಕ್ ಟ್ಯಾಕ್ಸಿಸೇವೆಯಿಂದ ಪರಿಸರಕ್ಕೆ ಹಾನಿ ಉಂಟಾಗಲಿದೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮ ರೂಪಿಸಿದ್ದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚಾಗಿತ್ತು. ಈಗಲೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಎಚ್ಚರಿಸಲಾಗಿದೆ.

ವಿಮೆ ಇಲ್ಲದಿರುವ ಬೈಕ್‍ಗಳ ಬಳಕೆ ಸಂದರ್ಭದಲ್ಲಿ ಸಂಭವಿಸುವ ಅಪಘಾತದದಲ್ಲಿ ವಿಮಾ ಸೌಲಭ್ಯ ದೊರೆಯುವುದು ಅಸಾಧ್ಯವಾಗಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಸಮಿತಿಯ ಎಲ್ಲಾ ಸದಸ್ಯರು ಒಮತದ ನಿರ್ಧಾರ ತಿಳಿಸಿರುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

10 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

12 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

12 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

12 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago