ರಾಜ್ಯ

ಬೈಕ್‌ ಟ್ಯಾಕ್ಸಿ ಸೇವೆಯಿಂದ ಸಂಚಾರ ದಟ್ಟಣೆ, ಅಪಘಾತವೂ ಹೆಚ್ಚು : ವರದಿ

ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸೇವೆ ಅಗತ್ಯತೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರ ಸಾರಿಗೆ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಇದೀಗ ವರದಿ ಸಿದ್ದಪಡಿಸಿರುವ ಸಮಿತಿಯು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿಸುವುದರಿಂದ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದೇ ವರದಿಯನ್ನು ನ್ಯಾಯಲಯಕ್ಕೂ ಸಲ್ಲಿಸಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಳ್ಳಲಾಗಿದೆ.

ಕಳೆದ 2015 ರಿಂದ ಇಲ್ಲಿಯವರೆಗೆ ಬೈಕ್‍ಗಳ ಸಂಖ್ಯೆ ಶೇ.98ರಷ್ಟು ಮತ್ತು ಕಾರುಗಳ ಸಂಖ್ಯೆ ಶೇ.79ರಷ್ಟು ಹೆಚ್ಚಳವಾಗಿದೆ. ಅದೇ ಸಮೂಹ ಸಾರಿಗೆಯಾದ ಬಿಎಂಟಿಸಿ ಬಸ್‍ಗಳ ಸಂಖ್ಯೆ ಕೇವಲ ಶೇ.14ರಷ್ಟು ಮಾತ್ರ ಹೆಚ್ಚಳವಾಗಿದೆ. ಸದ್ಯ ಬೆಂಗಳೂರಿನಲ್ಲಿ 82.83 ಲಕ್ಷ ಬೈಕ್‍ಗಳು, 23.83 ಲಕ್ಷ ಕಾರುಗಳು ಸೇರಿ ಒಟ್ಟು 1.06 ಕೋಟಿ ಬೈಕ್ ಮತ್ತು ಕಾರುಗಳು ಇವೆ.

ಇದನ್ನು ಓದಿ: ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಈಗಾಗಲೇ ವಾಹನಗಳ ಸಂಖ್ಯೆಲ್ಲಿ ಭಾರಿ ಏರಿಕೆಯಾಗಿರುವುದರಿಂದ ಬೈಕ್ ಟ್ಯಾಕ್ಸಿಗಳಿಗೆ ಅನುಮತಿಸಿದರೆ ನಗರದಲ್ಲಿ ಬೈಕ್‍ಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ನಗರದ ಸಂಚಾರ ದಟ್ಟಣೆ ಅಸ್ತವ್ಯಸ್ತಗೊಳ್ಳಲಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಬದಲು ಜನ ಸಮೂಹ ಸಾರಿಗೆಗೆ ಹೆಚ್ಚಳಕ್ಕೆ ಕ್ರಮ ಕೈಗೊಂಡರೆ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ, ಮಾಲಿನ್ಯ ಪ್ರಮಾಣವೂ ಇಳಿಕೆಯಾಗಲಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಬಸ್ ಪ್ರಯಾಣಕ್ಕೆ ಹೋಲಿಸಿದರೆ ಬೈಕ್ ಟ್ಯಾಕ್ಸಿ ಶುಲ್ಕ ದುಬಾರಿಯಾಗುತ್ತದೆ. ಬಿಎಂಟಿಸಿ ಬಸ್‍ನಲ್ಲಿ ಎರಡು ಕಿಮೀಗೆ ಆರು ರೂ. ನೀಡಬೇಕು ಅದೇ ಬೈಕ್ ಟ್ಯಾಕ್ಸಿಯಲ್ಲಿ 48 ರೂ.ಗಳ ದರ ನೀಡಬೇಕಾಗುತ್ತದೆ. ಇದು ಸಹ ಸಾರ್ವಜನಿಕರಿಗೆ ಹೊರೆಯಾಗುವುದು ಗ್ಯಾರಂಟಿ ಎಂದು ವರದಿ ಹೇಳಿದೆ.

ಬೈಕ್ ಟ್ಯಾಕ್ಸಿಸೇವೆಯಿಂದ ಪರಿಸರಕ್ಕೆ ಹಾನಿ ಉಂಟಾಗಲಿದೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮ ರೂಪಿಸಿದ್ದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚಾಗಿತ್ತು. ಈಗಲೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಎಚ್ಚರಿಸಲಾಗಿದೆ.

ವಿಮೆ ಇಲ್ಲದಿರುವ ಬೈಕ್‍ಗಳ ಬಳಕೆ ಸಂದರ್ಭದಲ್ಲಿ ಸಂಭವಿಸುವ ಅಪಘಾತದದಲ್ಲಿ ವಿಮಾ ಸೌಲಭ್ಯ ದೊರೆಯುವುದು ಅಸಾಧ್ಯವಾಗಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಸಮಿತಿಯ ಎಲ್ಲಾ ಸದಸ್ಯರು ಒಮತದ ನಿರ್ಧಾರ ತಿಳಿಸಿರುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago