ರಾಜ್ಯ

ಬೈಕ್‌ ಟ್ಯಾಕ್ಸಿ ಸೇವೆಯಿಂದ ಸಂಚಾರ ದಟ್ಟಣೆ, ಅಪಘಾತವೂ ಹೆಚ್ಚು : ವರದಿ

ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸೇವೆ ಅಗತ್ಯತೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರ ಸಾರಿಗೆ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಇದೀಗ ವರದಿ ಸಿದ್ದಪಡಿಸಿರುವ ಸಮಿತಿಯು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿಸುವುದರಿಂದ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದೇ ವರದಿಯನ್ನು ನ್ಯಾಯಲಯಕ್ಕೂ ಸಲ್ಲಿಸಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಳ್ಳಲಾಗಿದೆ.

ಕಳೆದ 2015 ರಿಂದ ಇಲ್ಲಿಯವರೆಗೆ ಬೈಕ್‍ಗಳ ಸಂಖ್ಯೆ ಶೇ.98ರಷ್ಟು ಮತ್ತು ಕಾರುಗಳ ಸಂಖ್ಯೆ ಶೇ.79ರಷ್ಟು ಹೆಚ್ಚಳವಾಗಿದೆ. ಅದೇ ಸಮೂಹ ಸಾರಿಗೆಯಾದ ಬಿಎಂಟಿಸಿ ಬಸ್‍ಗಳ ಸಂಖ್ಯೆ ಕೇವಲ ಶೇ.14ರಷ್ಟು ಮಾತ್ರ ಹೆಚ್ಚಳವಾಗಿದೆ. ಸದ್ಯ ಬೆಂಗಳೂರಿನಲ್ಲಿ 82.83 ಲಕ್ಷ ಬೈಕ್‍ಗಳು, 23.83 ಲಕ್ಷ ಕಾರುಗಳು ಸೇರಿ ಒಟ್ಟು 1.06 ಕೋಟಿ ಬೈಕ್ ಮತ್ತು ಕಾರುಗಳು ಇವೆ.

ಇದನ್ನು ಓದಿ: ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಈಗಾಗಲೇ ವಾಹನಗಳ ಸಂಖ್ಯೆಲ್ಲಿ ಭಾರಿ ಏರಿಕೆಯಾಗಿರುವುದರಿಂದ ಬೈಕ್ ಟ್ಯಾಕ್ಸಿಗಳಿಗೆ ಅನುಮತಿಸಿದರೆ ನಗರದಲ್ಲಿ ಬೈಕ್‍ಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ನಗರದ ಸಂಚಾರ ದಟ್ಟಣೆ ಅಸ್ತವ್ಯಸ್ತಗೊಳ್ಳಲಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಬದಲು ಜನ ಸಮೂಹ ಸಾರಿಗೆಗೆ ಹೆಚ್ಚಳಕ್ಕೆ ಕ್ರಮ ಕೈಗೊಂಡರೆ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ, ಮಾಲಿನ್ಯ ಪ್ರಮಾಣವೂ ಇಳಿಕೆಯಾಗಲಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಬಸ್ ಪ್ರಯಾಣಕ್ಕೆ ಹೋಲಿಸಿದರೆ ಬೈಕ್ ಟ್ಯಾಕ್ಸಿ ಶುಲ್ಕ ದುಬಾರಿಯಾಗುತ್ತದೆ. ಬಿಎಂಟಿಸಿ ಬಸ್‍ನಲ್ಲಿ ಎರಡು ಕಿಮೀಗೆ ಆರು ರೂ. ನೀಡಬೇಕು ಅದೇ ಬೈಕ್ ಟ್ಯಾಕ್ಸಿಯಲ್ಲಿ 48 ರೂ.ಗಳ ದರ ನೀಡಬೇಕಾಗುತ್ತದೆ. ಇದು ಸಹ ಸಾರ್ವಜನಿಕರಿಗೆ ಹೊರೆಯಾಗುವುದು ಗ್ಯಾರಂಟಿ ಎಂದು ವರದಿ ಹೇಳಿದೆ.

ಬೈಕ್ ಟ್ಯಾಕ್ಸಿಸೇವೆಯಿಂದ ಪರಿಸರಕ್ಕೆ ಹಾನಿ ಉಂಟಾಗಲಿದೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮ ರೂಪಿಸಿದ್ದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚಾಗಿತ್ತು. ಈಗಲೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಎಚ್ಚರಿಸಲಾಗಿದೆ.

ವಿಮೆ ಇಲ್ಲದಿರುವ ಬೈಕ್‍ಗಳ ಬಳಕೆ ಸಂದರ್ಭದಲ್ಲಿ ಸಂಭವಿಸುವ ಅಪಘಾತದದಲ್ಲಿ ವಿಮಾ ಸೌಲಭ್ಯ ದೊರೆಯುವುದು ಅಸಾಧ್ಯವಾಗಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಸಮಿತಿಯ ಎಲ್ಲಾ ಸದಸ್ಯರು ಒಮತದ ನಿರ್ಧಾರ ತಿಳಿಸಿರುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

6 hours ago