ರಾಜ್ಯ

ಬೈಕ್‌ ಟ್ಯಾಕ್ಸಿ ಸೇವೆಯಿಂದ ಸಂಚಾರ ದಟ್ಟಣೆ, ಅಪಘಾತವೂ ಹೆಚ್ಚು : ವರದಿ

ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸೇವೆ ಅಗತ್ಯತೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರ ಸಾರಿಗೆ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಇದೀಗ ವರದಿ ಸಿದ್ದಪಡಿಸಿರುವ ಸಮಿತಿಯು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿಸುವುದರಿಂದ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದೇ ವರದಿಯನ್ನು ನ್ಯಾಯಲಯಕ್ಕೂ ಸಲ್ಲಿಸಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಳ್ಳಲಾಗಿದೆ.

ಕಳೆದ 2015 ರಿಂದ ಇಲ್ಲಿಯವರೆಗೆ ಬೈಕ್‍ಗಳ ಸಂಖ್ಯೆ ಶೇ.98ರಷ್ಟು ಮತ್ತು ಕಾರುಗಳ ಸಂಖ್ಯೆ ಶೇ.79ರಷ್ಟು ಹೆಚ್ಚಳವಾಗಿದೆ. ಅದೇ ಸಮೂಹ ಸಾರಿಗೆಯಾದ ಬಿಎಂಟಿಸಿ ಬಸ್‍ಗಳ ಸಂಖ್ಯೆ ಕೇವಲ ಶೇ.14ರಷ್ಟು ಮಾತ್ರ ಹೆಚ್ಚಳವಾಗಿದೆ. ಸದ್ಯ ಬೆಂಗಳೂರಿನಲ್ಲಿ 82.83 ಲಕ್ಷ ಬೈಕ್‍ಗಳು, 23.83 ಲಕ್ಷ ಕಾರುಗಳು ಸೇರಿ ಒಟ್ಟು 1.06 ಕೋಟಿ ಬೈಕ್ ಮತ್ತು ಕಾರುಗಳು ಇವೆ.

ಇದನ್ನು ಓದಿ: ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಈಗಾಗಲೇ ವಾಹನಗಳ ಸಂಖ್ಯೆಲ್ಲಿ ಭಾರಿ ಏರಿಕೆಯಾಗಿರುವುದರಿಂದ ಬೈಕ್ ಟ್ಯಾಕ್ಸಿಗಳಿಗೆ ಅನುಮತಿಸಿದರೆ ನಗರದಲ್ಲಿ ಬೈಕ್‍ಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ನಗರದ ಸಂಚಾರ ದಟ್ಟಣೆ ಅಸ್ತವ್ಯಸ್ತಗೊಳ್ಳಲಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಬದಲು ಜನ ಸಮೂಹ ಸಾರಿಗೆಗೆ ಹೆಚ್ಚಳಕ್ಕೆ ಕ್ರಮ ಕೈಗೊಂಡರೆ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ, ಮಾಲಿನ್ಯ ಪ್ರಮಾಣವೂ ಇಳಿಕೆಯಾಗಲಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಬಸ್ ಪ್ರಯಾಣಕ್ಕೆ ಹೋಲಿಸಿದರೆ ಬೈಕ್ ಟ್ಯಾಕ್ಸಿ ಶುಲ್ಕ ದುಬಾರಿಯಾಗುತ್ತದೆ. ಬಿಎಂಟಿಸಿ ಬಸ್‍ನಲ್ಲಿ ಎರಡು ಕಿಮೀಗೆ ಆರು ರೂ. ನೀಡಬೇಕು ಅದೇ ಬೈಕ್ ಟ್ಯಾಕ್ಸಿಯಲ್ಲಿ 48 ರೂ.ಗಳ ದರ ನೀಡಬೇಕಾಗುತ್ತದೆ. ಇದು ಸಹ ಸಾರ್ವಜನಿಕರಿಗೆ ಹೊರೆಯಾಗುವುದು ಗ್ಯಾರಂಟಿ ಎಂದು ವರದಿ ಹೇಳಿದೆ.

ಬೈಕ್ ಟ್ಯಾಕ್ಸಿಸೇವೆಯಿಂದ ಪರಿಸರಕ್ಕೆ ಹಾನಿ ಉಂಟಾಗಲಿದೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮ ರೂಪಿಸಿದ್ದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚಾಗಿತ್ತು. ಈಗಲೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಎಚ್ಚರಿಸಲಾಗಿದೆ.

ವಿಮೆ ಇಲ್ಲದಿರುವ ಬೈಕ್‍ಗಳ ಬಳಕೆ ಸಂದರ್ಭದಲ್ಲಿ ಸಂಭವಿಸುವ ಅಪಘಾತದದಲ್ಲಿ ವಿಮಾ ಸೌಲಭ್ಯ ದೊರೆಯುವುದು ಅಸಾಧ್ಯವಾಗಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಸಮಿತಿಯ ಎಲ್ಲಾ ಸದಸ್ಯರು ಒಮತದ ನಿರ್ಧಾರ ತಿಳಿಸಿರುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

5 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

6 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

6 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

11 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

12 hours ago