taxi bike
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ(ಆ.21) ಬೈಕ್ ಟ್ಯಾಕ್ಸಿ ಸೇವೆ ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ್ಯಾಪಿಡೊ ಆ್ಯಪ್ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್ಗಳಿಗೆ ದುಬಾರಿ ಹಣ ಪಾವತಿಸುತ್ತಿದ್ದ ಜನರಿಗೆ ಸ್ವಲ್ಪ ರಿಲೀಫ್ ಸಿಗಲಿದೆ.
ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್ ಟ್ಯಾಕ್ಸಿಗಳ ಮೇಲೆ ಆರ್ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು.
ಬೈಕ್ ಟ್ಯಾಕ್ಸಿಗೆ ನೀತಿ ಚೌಕಟ್ಟು ನಿಗದಿಪಡಿಸಲು ಸೂಚನೆ
ಇದರ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಸೇವೆ ರದ್ದು ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಸದ್ಯ ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಸೆಪ್ಟೆಂಬರ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸದ್ಯ ರಾಜ್ಯ ಸರ್ಕಾರ ಇಂದಿನಿಂದ ಬೈಕ್ ಟ್ಯಾಕಿ ಸೇವೆಯನ್ನು ಆರಂಭಿಸಿದೆ.
ಬೈಕ್ ಟ್ಯಾಕಿ ಸೇವೆ ಆರಂಭ ಬೆನ್ನಲ್ಲೇ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಸಾರಿಗೆ ಸಚಿವರ ಭೇಟಿಗೆ ತೆರಳಲಿದ್ದಾರೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಕೋರ್ಟ್ ನಿರ್ದೇಶನ ಪ್ರತಿ ಸಾರಿಗೆ ಇಲಾಖೆಗೆ ಅಧಿಕೃತವಾಗಿ ಸಾರಿಗೆ ಅಧಿಕಾರಿಗಳ ಕೈಸೇರುವ ಸಾಧ್ಯತೆ ಇದೆ. ತಲುಪಿದ ನಂತರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂದು ಇಲಾಖೆ ಚಿಂತನೆ ನಡೆಸಲಿದೆ. ಸದ್ಯ ಈ ಬಗ್ಗೆ ಮಾಧ್ಯಮಗಳಿಗೆ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…