taxi bike
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ(ಆ.21) ಬೈಕ್ ಟ್ಯಾಕ್ಸಿ ಸೇವೆ ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ್ಯಾಪಿಡೊ ಆ್ಯಪ್ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್ಗಳಿಗೆ ದುಬಾರಿ ಹಣ ಪಾವತಿಸುತ್ತಿದ್ದ ಜನರಿಗೆ ಸ್ವಲ್ಪ ರಿಲೀಫ್ ಸಿಗಲಿದೆ.
ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್ ಟ್ಯಾಕ್ಸಿಗಳ ಮೇಲೆ ಆರ್ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು.
ಬೈಕ್ ಟ್ಯಾಕ್ಸಿಗೆ ನೀತಿ ಚೌಕಟ್ಟು ನಿಗದಿಪಡಿಸಲು ಸೂಚನೆ
ಇದರ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಸೇವೆ ರದ್ದು ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಸದ್ಯ ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಸೆಪ್ಟೆಂಬರ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸದ್ಯ ರಾಜ್ಯ ಸರ್ಕಾರ ಇಂದಿನಿಂದ ಬೈಕ್ ಟ್ಯಾಕಿ ಸೇವೆಯನ್ನು ಆರಂಭಿಸಿದೆ.
ಬೈಕ್ ಟ್ಯಾಕಿ ಸೇವೆ ಆರಂಭ ಬೆನ್ನಲ್ಲೇ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಸಾರಿಗೆ ಸಚಿವರ ಭೇಟಿಗೆ ತೆರಳಲಿದ್ದಾರೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಕೋರ್ಟ್ ನಿರ್ದೇಶನ ಪ್ರತಿ ಸಾರಿಗೆ ಇಲಾಖೆಗೆ ಅಧಿಕೃತವಾಗಿ ಸಾರಿಗೆ ಅಧಿಕಾರಿಗಳ ಕೈಸೇರುವ ಸಾಧ್ಯತೆ ಇದೆ. ತಲುಪಿದ ನಂತರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂದು ಇಲಾಖೆ ಚಿಂತನೆ ನಡೆಸಲಿದೆ. ಸದ್ಯ ಈ ಬಗ್ಗೆ ಮಾಧ್ಯಮಗಳಿಗೆ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…