ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಪರಿಣಾಮ ಬೈರತಿ ಬಸವರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ಸಹ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದ ನಂತರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ಅರ್ಜಿಯನ್ನು ‘ವಾಪಸ್ ಪಡೆದುಕೊಂಡಿದ್ದಾಗಿ’ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ.
ಸಿಐಡಿ ತನಿಖೆಯಲ್ಲಿ ಅವರು ಕೊಲೆಯ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ನೇರ ಸಂಪರ್ಕ ಇದ್ದುದು ಬಹಿರಂಗವಾಗಿದೆ. ಬೈರತಿ ಬಸವರಾಜ್ ಅವರು ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…