ರಾಜ್ಯ

ಬಿಕ್ಲು ಶಿವು ಕೊಲೆ ಪ್ರಕರಣ | ಪೊಲೀಸರು ಬಂಧಿಸಿರುವ ಅನಿಲ್‌ಗೂ, ತಮಗೂ ಯಾವುದೇ ಸಂಬಂಧವಿಲ್ಲ : ಸ್ಪಷ್ಟನೆ ನೀಡಿದ ಶಾಸಕ ಬೈರತಿ ಬಸವರಾಜ್‌

ಬೆಂಗಳೂರು : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವು ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಅನಿಲ್‍ಗೂ, ನನಾಗಲೀ ಇಲ್ಲವೇ ನಮ್ ಕುಟುಂಬಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾಗಿರುವ ಅನಿಲ್ ತಮ್ಮ ಸಹೋದರ ಮಗನೆಂದು ಮಾಧ್ಯಮಗಳದಲ್ಲಿ ಬಿತ್ತರಿಸಲಾಗುತ್ತಿದೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ದೂರವಾದ ಮಾತು. ಆತ ಯಾರೆಂಬುದೇ ನಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ನಮ್ಮ ಸಹೋದರನ ಮಗ ಶಾಮೀಲಾಗಿದ್ದಾರೆ ಎಂದು ಅನಗತ್ಯವಾಗಿ ರಾಜಕೀಯ ದುರುದ್ದೇಶದಿಂದ ಕೆಲವರು ಅವರ ಚಾರಿತ್ರ್ಯವಧೆ ಮಾಡಲು ಷಡ್ಯಂತ್ರ ನಡೆಸಿದ್ದಾರೆ. ನಮ್ಮ ಸಹೋದರನ ಮಗನಿಗೂ ಇದಕ್ಕೂ ಸಂಬಂಧವಿಲ್ಲ. ಅನಗತ್ಯವಾಗಿ ಇಂತಹ ವಿಷಯಗಳು ಏಕೆ ಮುನ್ನೆಲೆಗೆ ಬರುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಸಂಪೂರ್ಣವಾಗಿ ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ರಾಜಕೀಯ ಪ್ರೇರಿತ ಈ ಪ್ರಕರಣವನ್ನು ಹೇಗೆ ಎದುರಿಸಬೇಕೆಂಬುದು ನನಗೆ ಗೊತ್ತಿದೆ. ಇಂತಹ ಷಡ್ಯಂತ್ರಗಳನ್ನು ಎದುರಿಸಿಯೇ ನಾನು ಮೇಲಕ್ಕೆ ಬಂದಿದ್ದೇನೆ. . ಇದಕ್ಕೆಲ್ಲಾ ಹೆದರುವ ಜಾಯಮಾನದವನಲ್ಲ ಎಂದು ಅವರು ಹೇಳಿದ್ದಾರೆ.

ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ. ಸೂಕ್ತ ಕಾಲದಲ್ಲಿ ಎಲ್ಲಾ ದಾಖಲಗಳೊಂದಿಗೆ ಮಾಧ್ಯುಮಗಳ ಮುಂದೆ ಬರುತ್ತೇನೆ. ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ದೇಶದ ಕಾನೂನಿಗೆ ತಲೆಬಾಗುತ್ತೇನೆ. ಪೊಲೀಸರ ವಿಚಾರಣೆಗೆ ಹಿಂದೆಯೂ ಸಹಕಾರ ಕೊಟ್ಟಿದ್ದೇನೆ , ಮುಂದೆಯೂ ಕೊಡುತ್ತೇನೆ. ಇದಕ್ಕೆಲ್ಲ ಹೆದರಿ ಕೂರುವ ಜಾಯಮಾನ ನನ್ನದಲ್ಲ. ಏನೇ ಬಂದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಬೈರತಿ ಬಸವರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

8 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

18 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

33 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

35 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

38 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

42 mins ago