ರಾಜ್ಯ

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ತೃತೀಯ ಭಾಷಾ ವಿಷಯಕ್ಕೆ ಅಂಕಗಳಿಗೆ ಬದಲಾಗಿ ಗ್ರೇಡ್ ನೀಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುಷಿಪಡಿಸಲು ಬಿಜೆಪಿಯವರು ಹಿಂದಿ… ಹಿಂದಿ ಎಂದು ಪ್ರಮೋಟ್ ಮಾಡುತ್ತಿರುವುದು ಸರಿಯಲ್ಲ. ಎಲ್ಲಾ ಕಡೆಯು ಎರಡು ಭಾಷೆ ಮಾತ್ರ ಜಾರಿಯಲ್ಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ತೃತೀಯ ಭಾಷೆ ಹೇರಿಕೆಯಾಗಿದೆ. ಕೆಲವು ಕಡೆ ಕನ್ನಡ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಕಲಿಯುತ್ತಿದ್ದಾರೆ. ನಮ ಕನ್ನಡಿಗರು ಹೊಟ್ಟೆಪಾಡಿಗಾಗಿ ಹಿಂದಿ ಬೋಧನೆ ಮಾಡುತ್ತಿದ್ದಾರೆ. ಅಂಥವರಿಗೆ ಯಾವುದೇ ಒತ್ತಡ ಆಗಬಾರದು. ಅಲ್ಲದೆ ಯಾವುದೇ ಭಾಷೆ ವಿರುದ್ಧ ನಾವಿಲ್ಲ. ಈಗ ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು ಎಂಬುದನ್ನು ಮುಖ್ಯಮಂತ್ರಿಯವರು ಹೇಳಿದ್ದಾರೆಂದು ತಿಳಿಸಿದರು.

ಬಿಜೆಪಿಯವರು ಟೀಕೆಟಿಪ್ಪಣಿ ಮಾಡುತ್ತಾರೆಂದು ಉತ್ತರ ಕೊಡಲು ಆಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಆಳಿದವರು. ಅವರಿಗೆ ಗೌರವ ಕೊಡುತ್ತೇವೆ. ಆದರೆ ಕನ್ನಡಿಗರಿಗೆ ಮೋಸ ಮಾಡಿದವರೇ ಅವರು. ರಾಜ್ಯದ ತೆರಿಗೆ ಸಂಗ್ರಹ ಕುರಿತಂತೆ ಬಿಜೆಪಿಯವರು ದನಿ ಎತ್ತುವುದಿಲ್ಲ. ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬರಗಾಲ ಬಂದಾಗಲೂ ಬಿಜೆಪಿಯವರು ದನಿ ಎತ್ತುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಸುಳ್ಳು ಸುದ್ದಿ ನಂಬಬೇಡಿ: ಪ್ರಮೋದಾದೇವಿ ಒಡೆಯರ್‌

ರಾಜಮನೆತನದ ಆಸ್ತಿ ಹೆಸರಿನಲ್ಲಿ ವಂಚನೆ ಹುನ್ನಾರ  ಮೈಸೂರು: ನಗರದ ಹಲವು ಕಡೆಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೊಬ್ಬರಿಗೆ ಮಾರಾಟ ಮಾಡಿ…

3 mins ago

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

11 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

11 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

11 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

11 hours ago