ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ತೃತೀಯ ಭಾಷಾ ವಿಷಯಕ್ಕೆ ಅಂಕಗಳಿಗೆ ಬದಲಾಗಿ ಗ್ರೇಡ್ ನೀಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುಷಿಪಡಿಸಲು ಬಿಜೆಪಿಯವರು ಹಿಂದಿ… ಹಿಂದಿ ಎಂದು ಪ್ರಮೋಟ್ ಮಾಡುತ್ತಿರುವುದು ಸರಿಯಲ್ಲ. ಎಲ್ಲಾ ಕಡೆಯು ಎರಡು ಭಾಷೆ ಮಾತ್ರ ಜಾರಿಯಲ್ಲಿದೆ ಎಂದರು.
ಗ್ರಾಮೀಣ ಭಾಗದಲ್ಲಿ ತೃತೀಯ ಭಾಷೆ ಹೇರಿಕೆಯಾಗಿದೆ. ಕೆಲವು ಕಡೆ ಕನ್ನಡ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಕಲಿಯುತ್ತಿದ್ದಾರೆ. ನಮ ಕನ್ನಡಿಗರು ಹೊಟ್ಟೆಪಾಡಿಗಾಗಿ ಹಿಂದಿ ಬೋಧನೆ ಮಾಡುತ್ತಿದ್ದಾರೆ. ಅಂಥವರಿಗೆ ಯಾವುದೇ ಒತ್ತಡ ಆಗಬಾರದು. ಅಲ್ಲದೆ ಯಾವುದೇ ಭಾಷೆ ವಿರುದ್ಧ ನಾವಿಲ್ಲ. ಈಗ ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು ಎಂಬುದನ್ನು ಮುಖ್ಯಮಂತ್ರಿಯವರು ಹೇಳಿದ್ದಾರೆಂದು ತಿಳಿಸಿದರು.
ಬಿಜೆಪಿಯವರು ಟೀಕೆಟಿಪ್ಪಣಿ ಮಾಡುತ್ತಾರೆಂದು ಉತ್ತರ ಕೊಡಲು ಆಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಆಳಿದವರು. ಅವರಿಗೆ ಗೌರವ ಕೊಡುತ್ತೇವೆ. ಆದರೆ ಕನ್ನಡಿಗರಿಗೆ ಮೋಸ ಮಾಡಿದವರೇ ಅವರು. ರಾಜ್ಯದ ತೆರಿಗೆ ಸಂಗ್ರಹ ಕುರಿತಂತೆ ಬಿಜೆಪಿಯವರು ದನಿ ಎತ್ತುವುದಿಲ್ಲ. ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬರಗಾಲ ಬಂದಾಗಲೂ ಬಿಜೆಪಿಯವರು ದನಿ ಎತ್ತುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…