ರಾಜ್ಯ

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ತೃತೀಯ ಭಾಷಾ ವಿಷಯಕ್ಕೆ ಅಂಕಗಳಿಗೆ ಬದಲಾಗಿ ಗ್ರೇಡ್ ನೀಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುಷಿಪಡಿಸಲು ಬಿಜೆಪಿಯವರು ಹಿಂದಿ… ಹಿಂದಿ ಎಂದು ಪ್ರಮೋಟ್ ಮಾಡುತ್ತಿರುವುದು ಸರಿಯಲ್ಲ. ಎಲ್ಲಾ ಕಡೆಯು ಎರಡು ಭಾಷೆ ಮಾತ್ರ ಜಾರಿಯಲ್ಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ತೃತೀಯ ಭಾಷೆ ಹೇರಿಕೆಯಾಗಿದೆ. ಕೆಲವು ಕಡೆ ಕನ್ನಡ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಕಲಿಯುತ್ತಿದ್ದಾರೆ. ನಮ ಕನ್ನಡಿಗರು ಹೊಟ್ಟೆಪಾಡಿಗಾಗಿ ಹಿಂದಿ ಬೋಧನೆ ಮಾಡುತ್ತಿದ್ದಾರೆ. ಅಂಥವರಿಗೆ ಯಾವುದೇ ಒತ್ತಡ ಆಗಬಾರದು. ಅಲ್ಲದೆ ಯಾವುದೇ ಭಾಷೆ ವಿರುದ್ಧ ನಾವಿಲ್ಲ. ಈಗ ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು ಎಂಬುದನ್ನು ಮುಖ್ಯಮಂತ್ರಿಯವರು ಹೇಳಿದ್ದಾರೆಂದು ತಿಳಿಸಿದರು.

ಬಿಜೆಪಿಯವರು ಟೀಕೆಟಿಪ್ಪಣಿ ಮಾಡುತ್ತಾರೆಂದು ಉತ್ತರ ಕೊಡಲು ಆಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಆಳಿದವರು. ಅವರಿಗೆ ಗೌರವ ಕೊಡುತ್ತೇವೆ. ಆದರೆ ಕನ್ನಡಿಗರಿಗೆ ಮೋಸ ಮಾಡಿದವರೇ ಅವರು. ರಾಜ್ಯದ ತೆರಿಗೆ ಸಂಗ್ರಹ ಕುರಿತಂತೆ ಬಿಜೆಪಿಯವರು ದನಿ ಎತ್ತುವುದಿಲ್ಲ. ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬರಗಾಲ ಬಂದಾಗಲೂ ಬಿಜೆಪಿಯವರು ದನಿ ಎತ್ತುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago