ರಾಜ್ಯ

ವಿದೇಶಗಳಿಂದ 6.2 ಶತಕೋಟಿ ಡಾಲರ್‌ ಹೂಡಿಕೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯಕ್ಕೆ ಮತ್ತು ಇಲ್ಲಿನ ಕಂಪನಿಗಳಿಗೆ ಹೂಡಿಕೆ ಸೆಳೆಯುವ ಉದ್ದೇಶದಿಂದ ಐಟಿ ಬಿಟಿ ಇಲಾಖೆ ಜೂನ್‌ ಮಧ್ಯಭಾಗದಲ್ಲಿ ವಿದೇಶಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದು ಫಲ ನೀಡುವ ಲಕ್ಷಣಗಳಿವೆ.

ವಿದೇಶಗಳಲ್ಲಿ ಕರ್ನಾಟಕದ ಸ್ಟಾರ್ಟಪ್‌ ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಯಲು ಮಾಡಿರುವ ರೋಡ್‌ ಶೋಗಳ ಪರಿಣಾಮ ಇದೀಗ 6.2 ಶತಕೋಟಿ ಅಮೆರಿಕನ್‌ ಡಾಲರ್‌ ಹೂಡಿಕೆಯನ್ನು ರಾಜ್ಯ ನಿರೀಕ್ಷಿಸುತ್ತಿದೆ. ಇದರ ಪರಿಣಾಮವಾಗಿ 35 ಸಾವಿರದಿಂದ 40 ಸಾವಿರ ಉದ್ಯೋಗ ಸೃಷ್ಟಿಯ ಭರವಸೆಯೂ ಮೂಡಿದೆ ಎಂದು ಅಂದಾಜಿಸಲಾಗಿದೆ.

ಎಲೆಕ್ಟ್ರಾನಿಕ್ಸ್‌, ಐಟಿ ಮತ್ತು ಬಿಟಿ ಇಲಾಖೆಯ ಅಧಿಕಾರಿಗಳು ಜೂನ್‌ ಮಧ್ಯಭಾಗದಲ್ಲಿ ರೋಡ್‌ ಶೋಗಳ ಮೂಲಕ ವಿವಿಧ ದೇಶಗಳೊಂದಿಗೆ ಹೊಸದಾಗಿ ಸಹಯೋಗವನ್ನು ಬೆಳೆಸಲು ಹಲವಾರು ನಗರಗಳಿಗೆ ಭೇಟಿ ನೀಡಿದ್ದರು.

6.2 ಬಿಲಿಯನ್‌ ಡಾಲರ್‌ ಹೂಡಿಕೆಯನ್ನು ನಿರೀಕ್ಷಿಸಲಾಗಿದ್ದು, ಉದ್ದೇಶಿತ ಜಾಗತಿಕ ಸಾಮರ್ಥ್ಯ ಕೇಂದ್ರಗಳು ರಾಜ್ಯದಲ್ಲಿ ಹಲವು ಉದ್ಯೋಗ ಸೃಷ್ಟಿಸಲಿವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ರೋಡ್‌ ಶೋಗಳ ಮುಖ್ಯ ಉದ್ದೇಶಗಳೆಂದರೆ ಕರ್ನಾಟಕದ ಜೈವಿಕ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್‌ ಪರಿಸರ ವ್ಯವಸ್ಥೆಯನ್ನು ವಿದೇಶಗಳಲ್ಲಿ ಪರಿಚಯಿಸುವುದಾಗಿದೆ. ಇದರಿಂದ ರಾಜ್ಯದಲ್ಲಿ ವಿದೇಶಿ ಹೂಡಿಕೆ ಹರಿದು ಬರಲು ಅನುಕೂಲವಾಗಲಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago