ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೇ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್ ಈ ಪರಿಸರಕ್ಕೆ ಮಾರಕವಾಗಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವ ಉತ್ಪನ್ನದ ಅಗತ್ಯವಿದೆ ಎಂದರು.
ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಸಿಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕೈಚೀಲ ಪರಿಸರಕ್ಕೆ ಮಾರಕವಲ್ಲ. ಇದು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾದಲ್ಲಿ ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದರು.
ಸಭೆಯಲ್ಲಿ ಅಧಿಕಾರೇತರ ಸದಸ್ಯರಾದ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…