ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೇ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್ ಈ ಪರಿಸರಕ್ಕೆ ಮಾರಕವಾಗಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವ ಉತ್ಪನ್ನದ ಅಗತ್ಯವಿದೆ ಎಂದರು.
ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಸಿಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕೈಚೀಲ ಪರಿಸರಕ್ಕೆ ಮಾರಕವಲ್ಲ. ಇದು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾದಲ್ಲಿ ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದರು.
ಸಭೆಯಲ್ಲಿ ಅಧಿಕಾರೇತರ ಸದಸ್ಯರಾದ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಮತ್ತಿತರರು ಉಪಸ್ಥಿತರಿದ್ದರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…