ರಾಜ್ಯ

ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್‌

ಬೆಂಗಳೂರು: ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವುದನ್ನು ಖಚಿತಪಡಿಸಿಕೊಳ್ಳಲು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದೆ.

ಯೋಜನೆಯ ಹಣವು ನಿಜವಾದ ಅರ್ಹ ಮಹಿಳೆಯರಿಗೆ ಮಾತ್ರ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮತ್ತು ಅನರ್ಹರು ಅಥವಾ ಮೃತ ವ್ಯಕ್ತಿಗಳ ಹೆಸರಿನಲ್ಲಿ ಹಣ ದುರ್ಬಳಕೆಯಾಗುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ. ಡಿಜಿಟಲ್ ದೃಢೀಕರಣದ ಮೂಲಕ ಹಣ ವರ್ಗಾವಣೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವುದು ಇದರ ಪ್ರಮುಖ ಗುರಿಯಾಗಿದೆ.

ಬಯೋಮೆಟ್ರಿಕ್‍ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ 2 ಸಾವಿರ ರೂ. ಅಮೌಂಟ್ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಪ್ರತಿ ಫಲಾನುಭವಿ 5 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಬಯೋಮೆಟ್ರಿಕ್ ಜೊತೆಗೆ ಗೃಹಲಕ್ಷ್ಮಿ ಸೊಸೈಟಿಗೆ ಸದಸ್ಯತ್ವವನ್ನ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಡಿಕೊಳ್ತಿದೆ. ಸದಸ್ಯತ್ವ ಬಯಸುವ ಫಲಾನುಭವಿಗಳು 1,250 ರೂ. ಪಾವತಿ ಮಾಡಬೇಕಿದೆ. ಒಂದು ವೇಳೆ ಗೃಹಲಕ್ಷ್ಮಿ ಸೊಸೈಟಿ ಸದಸ್ಯತ್ವ ಬೇಡ ಅಂದರೆ ಬಯೋಮೆಟ್ರಿಕ್ ಅಷ್ಟೇ ಮಾಡಿಸಿಕೊಳ್ಳಬಹುದು. ಮುಂದಿನ ತಿಂಗಳ ಒಳಗಡೆ ಬಯೋಮೆಟ್ರಿಕ್ ಜಾರಿ ಮಾಡುವ ಚಿಂತನೆಯಲ್ಲಿದ್ದು, ಈಗಾಗಲೇ ಗೃಹಲಕ್ಷ್ಮಿ ಬಯೋಮೆಟ್ರಿಕ್‍ಗಾಗಿ ಆಪ್ ಸಿದ್ಧಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

22 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago