ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇಂದು ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಹಕ್ಕಿ ಜ್ವರದ ಮಧ್ಯೆಯೂ ಕೋಳಿ ಸೇವನೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
೧) 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು
೨) ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು
೩) ಅಡುಗೆಗಾಗಿ ಕೋಳಿಮಾಂಸವನ್ನು ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು
೪) ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು
೫) ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು
೬) ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ
ಇದಿಷ್ಟು ನಿಯಮಗಳನ್ನು ಜನರು ಪಾಲನೆ ಮಾಡಲೇಬೇಕು ಎಂದು ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…