ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇಂದು ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಹಕ್ಕಿ ಜ್ವರದ ಮಧ್ಯೆಯೂ ಕೋಳಿ ಸೇವನೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
೧) 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು
೨) ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು
೩) ಅಡುಗೆಗಾಗಿ ಕೋಳಿಮಾಂಸವನ್ನು ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು
೪) ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು
೫) ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು
೬) ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ
ಇದಿಷ್ಟು ನಿಯಮಗಳನ್ನು ಜನರು ಪಾಲನೆ ಮಾಡಲೇಬೇಕು ಎಂದು ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…