ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇಂದು ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಹಕ್ಕಿ ಜ್ವರದ ಮಧ್ಯೆಯೂ ಕೋಳಿ ಸೇವನೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
೧) 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು
೨) ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು
೩) ಅಡುಗೆಗಾಗಿ ಕೋಳಿಮಾಂಸವನ್ನು ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು
೪) ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು
೫) ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು
೬) ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ
ಇದಿಷ್ಟು ನಿಯಮಗಳನ್ನು ಜನರು ಪಾಲನೆ ಮಾಡಲೇಬೇಕು ಎಂದು ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…