ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇಂದು ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಹಕ್ಕಿ ಜ್ವರದ ಮಧ್ಯೆಯೂ ಕೋಳಿ ಸೇವನೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
೧) 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು
೨) ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು
೩) ಅಡುಗೆಗಾಗಿ ಕೋಳಿಮಾಂಸವನ್ನು ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು
೪) ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು
೫) ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು
೬) ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ
ಇದಿಷ್ಟು ನಿಯಮಗಳನ್ನು ಜನರು ಪಾಲನೆ ಮಾಡಲೇಬೇಕು ಎಂದು ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…