ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಶುಸಂಗೋಪನಾ ಇಲಾಖೆ ನಿರ್ದೇಶನ ನೀಡಿದೆ.
ನೆರೆಯ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಕಂಡುಬರುತ್ತಿದ್ದು, ರಾಜ್ಯದಲ್ಲೂ ಆತಂಕ ಮನೆಮಾಡಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಕಾಗೆಗಳು ಮೃತಪಟ್ಟಿರುವುದು ಹಕ್ಕಿಜ್ವರದ ಭೀತಿ ಹೆಚ್ಚಾಗಲು ಕಾರಣವಾಗಿದೆ.
ಮಹಾರಾಷ್ಟ್ರದಲ್ಲೂ ಹಕ್ಕಿಜ್ವರದ ಆತಂಕ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದ ಜಿಲ್ಲೆಗಳಲ್ಲಿ ಕೋಳಿಗಳ ಸಾಗಾಣಿಕೆ ಮೇಲೆ ನಿಗಾ ವಹಿಸುವಂತೆ ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ.
ಒಂದು ವೇಳೆ ಹಕ್ಕಿಜ್ವರದ ಸೋಂಕು ಇರುವುದು ದೃಢಪಟ್ಟರೆ ಅಂತಹ ರಾಜ್ಯಗಳಿಂದ ಕೋಳಿ ರಾಜ್ಯ ಪ್ರವೇಶಿಸಲು ನಿರ್ಬಂಧ ಹೇರಲಾಗುತ್ತದೆ. ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸತ್ತ ಕೋಳಿ ಅಥವಾ ಪಕ್ಷಿಗಳು ಹಕ್ಕಿಜ್ವರದ ಸೋಂಕು ಹೊಂದಿದ್ದರೆ ಮನುಷ್ಯರಿಗೂ ಆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಇದೊಂದು ಅಪಾಯಕಾರಿ ರೋಗವಾಗಿರುವುದರಿಂದ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚಿಸಲಾಗಿದೆ.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…