ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಶುಸಂಗೋಪನಾ ಇಲಾಖೆ ನಿರ್ದೇಶನ ನೀಡಿದೆ.
ನೆರೆಯ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಕಂಡುಬರುತ್ತಿದ್ದು, ರಾಜ್ಯದಲ್ಲೂ ಆತಂಕ ಮನೆಮಾಡಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಕಾಗೆಗಳು ಮೃತಪಟ್ಟಿರುವುದು ಹಕ್ಕಿಜ್ವರದ ಭೀತಿ ಹೆಚ್ಚಾಗಲು ಕಾರಣವಾಗಿದೆ.
ಮಹಾರಾಷ್ಟ್ರದಲ್ಲೂ ಹಕ್ಕಿಜ್ವರದ ಆತಂಕ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದ ಜಿಲ್ಲೆಗಳಲ್ಲಿ ಕೋಳಿಗಳ ಸಾಗಾಣಿಕೆ ಮೇಲೆ ನಿಗಾ ವಹಿಸುವಂತೆ ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ.
ಒಂದು ವೇಳೆ ಹಕ್ಕಿಜ್ವರದ ಸೋಂಕು ಇರುವುದು ದೃಢಪಟ್ಟರೆ ಅಂತಹ ರಾಜ್ಯಗಳಿಂದ ಕೋಳಿ ರಾಜ್ಯ ಪ್ರವೇಶಿಸಲು ನಿರ್ಬಂಧ ಹೇರಲಾಗುತ್ತದೆ. ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸತ್ತ ಕೋಳಿ ಅಥವಾ ಪಕ್ಷಿಗಳು ಹಕ್ಕಿಜ್ವರದ ಸೋಂಕು ಹೊಂದಿದ್ದರೆ ಮನುಷ್ಯರಿಗೂ ಆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಇದೊಂದು ಅಪಾಯಕಾರಿ ರೋಗವಾಗಿರುವುದರಿಂದ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚಿಸಲಾಗಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…