ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಶುಸಂಗೋಪನಾ ಇಲಾಖೆ ನಿರ್ದೇಶನ ನೀಡಿದೆ.
ನೆರೆಯ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಕಂಡುಬರುತ್ತಿದ್ದು, ರಾಜ್ಯದಲ್ಲೂ ಆತಂಕ ಮನೆಮಾಡಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಕಾಗೆಗಳು ಮೃತಪಟ್ಟಿರುವುದು ಹಕ್ಕಿಜ್ವರದ ಭೀತಿ ಹೆಚ್ಚಾಗಲು ಕಾರಣವಾಗಿದೆ.
ಮಹಾರಾಷ್ಟ್ರದಲ್ಲೂ ಹಕ್ಕಿಜ್ವರದ ಆತಂಕ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದ ಜಿಲ್ಲೆಗಳಲ್ಲಿ ಕೋಳಿಗಳ ಸಾಗಾಣಿಕೆ ಮೇಲೆ ನಿಗಾ ವಹಿಸುವಂತೆ ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ.
ಒಂದು ವೇಳೆ ಹಕ್ಕಿಜ್ವರದ ಸೋಂಕು ಇರುವುದು ದೃಢಪಟ್ಟರೆ ಅಂತಹ ರಾಜ್ಯಗಳಿಂದ ಕೋಳಿ ರಾಜ್ಯ ಪ್ರವೇಶಿಸಲು ನಿರ್ಬಂಧ ಹೇರಲಾಗುತ್ತದೆ. ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸತ್ತ ಕೋಳಿ ಅಥವಾ ಪಕ್ಷಿಗಳು ಹಕ್ಕಿಜ್ವರದ ಸೋಂಕು ಹೊಂದಿದ್ದರೆ ಮನುಷ್ಯರಿಗೂ ಆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಇದೊಂದು ಅಪಾಯಕಾರಿ ರೋಗವಾಗಿರುವುದರಿಂದ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚಿಸಲಾಗಿದೆ.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…