ರಾಜ್ಯ

ಪಕ್ಷಿಗಳಿಗೆ ಧಾನ್ಯ ಚೆಲ್ಲುವುದಕ್ಕೆ ನಿಗದಿತ ಪ್ರದೇಶ ಗುರುತಿಸಿ: ಮೈಸೂರು ಜಿಲ್ಲಾಧಿಕಾರಿಗೆ ಸಚಿವ ಹೆಚ್.ಕೆ.ಪಾಟೀಲ್‌ ಸೂಚನೆ

ಬೆಂಗಳೂರು: ಜಗತ್ಪ್ರಸಿದ್ದ ಮೈಸೂರು ಅರಮನೆಯ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ದ್ವಾರದ ಮುಂಭಾಗ ಪಾರಿವಾಳಗಳಿಗೆ ನಿತ್ಯ ಧಾನ್ಯ ಚೆಲ್ಲುತ್ತಿರುವುದರಿಂದ ಅನಾನುಕೂಲವಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಧಾನ್ಯಗಳನ್ನು ಹಾಕಲು ನಿಗದಿತ ಪ್ರದೇಶ ಗುರುತಿಸುವಂತೆ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್‌ ಸೂಚನೆ ನೀಡಿದ್ದಾರೆ.

ಈ ಕುರಿತು ಖಡಕ್‌ ಆದೇಶ ಹೊರಡಿಸಿರುವ ಸಚಿವ ಹೆಚ್.ಕೆ.ಪಾಟೀಲ್‌ ಅವರು, ವಿಶ್ವವಿಖ್ಯಾತ, ಸಾಂಸ್ಕೃತಿಕ, ಪಾರಂಪರಿಕ, ಐತಿಹಾಸಿಕವುಳ್ಳ ತಾಣವಾದ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ದ್ವಾರದ ಮುಂದೆ ಪಾರಿವಾಳಗಳಿಗೆ ನಿತ್ಯ ಧಾನ್ಯಗಳನ್ನು ತಂದು ಚೆಲ್ಲುತ್ತಿದ್ದಾರೆ. ಇದರಿಂದ 10ನೇ ಚಾಮರಾಜೇಂದ್ರ ಒಡೆಯರ್‌ ಅವರ ಪ್ರತಿಮೆ ಮತ್ತು ಅರಮನೆಯ ಆವರಣದ ಸೌಂದರ್ಯ ಹಾಗೂ ಅದರ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಸಾರ್ವಜನಿಕ ಆರೋಗ್ಯ ಮತ್ತು ಪ್ರವಾಸಿಗರಿಗೆ ತೀವ್ರ ಅನಾನುಕೂಲವಾಗುತ್ತಿದೆ ಎಂದು ಹಲವಾರು ದೂರುಗಳು ಬಂದಿವೆ.

ಆದ್ದರಿಂದ ಅರಮನೆಯ ಆವರಣದ ಸ್ವಚ್ಛತೆ ಕಾಪಾಡುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಆದ್ದರಿಂದ ಪಕ್ಷಿಗಳಿಗೆ ಧಾನ್ಯ ನೀಡುವುದಕ್ಕೆ ನಿಗದಿತ ಪ್ರದೇಶ ಗುರುತಿಸಿ ಎಂದು ಜಿಲ್ಲಾಧಿಕಾರಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಿಗೆ ಸಚಿವ ಹೆಚ್.ಕೆ.ಪಾಟೀಲ್‌ ಖಡಕ್‌ ಸೂಚನೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago