Categories: ರಾಜ್ಯ

ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ

ವಿಜಯಪುರ: ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತಂತೆ ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನು, ಜನಸಾಮಾನ್ಯರಿಗೂ ಒಂದೇ ಕಾನೂನು. ಸ್ವಾಮೀಜಿಯವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಇಂತಹ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದರು‌.

ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ

ನಾನು ಕರ್ನಾಟಕದ ಮಂತ್ರಿಯಾಗಿದ್ದರೂ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಈಗಲೂ ಸಕ್ರಿಯವಾಗಿರುವೆ. ಮಂತ್ರಿಯಾಗಿರುವ ಕಾರಣ ಕೆಲಸದ ಒತ್ತಡದಿಂದಾಗಿ ಮೀಸಲಾತಿ ಹೋರಾಟದ ಒಂದೆರಡು ಸಭೆಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ನನ್ನ ತಮ್ಮ ಹಾಗೂ ನನ್ನ ಮಗ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಪಂಚಮಸಾಲಿ ಸಮಾಜ ಸದಾ ನನ್ನೊಂದಿಗಿದೆ. ನಾನು ಕೂಡ ಯಾವಾಗಲೂ ಸಮಾಜದ ಜೊತೆ ಇರುವೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನಾಲ್ಕು ಭಾರಿ ಭೇಟಿಯಾಗಿದ್ದೆವು. ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಈಗಾಗಲೇ ಮೂರು ಬಾರಿ ಭೇಟಿ ಮಾಡಲಾಗಿದೆ. ನಮ್ಮ ಸಮಾಜಕ್ಕೆ ಖಂಡಿತವಾಗಿಯೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದರು.

ಸಚಿವ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮಾತನಾಡಲು ನಾನು ಪಕ್ಷದ ಅಧ್ಯಕ್ಷೆಯೂ ಅಲ್ಲ, ಹೈಕಮಾಂಡ್ ಕೂಡ ಅಲ್ಲ ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತೀಯ ಸೇನೆಯಿಂದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಹೊಸ ವಿಡಿಯೋ ಬಿಡುಗಡೆ

ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…

53 mins ago

ದಳಪತಿ ವಿಜಯ್‌ ಅಭಿನಯದ ಜನನಾಯಗನ್‌ ಚಿತ್ರಕ್ಕೆ ಸುಪ್ರೀಂ ಬಿಗ್‌ಶಾಕ್‌

ಜನನಾಯಗನ್‌ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್‌ ಪ್ರೊಡಕ್ಷನ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಸಿದೆ. ಸೆನ್ಸಾರ್‌…

1 hour ago

ಪ್ರೀತಿ ಹೆಸರಿನಲ್ಲಿ ವಂಚನೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…

1 hour ago

ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ…

2 hours ago

ವಿಧಾನಸಭೆ ಚುನಾವಣೆಗೆ ಪ್ರತಾಪ್‌ ಸಿಂಹ ಸ್ಪರ್ಧೆ ಫಿಕ್ಸ್‌

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌…

2 hours ago

ದಕ್ಷಿಣ ಒಳನಾಡಿನಲ್ಲಿ ತಗ್ಗಿದ ಚಳಿ ಅಬ್ಬರ: ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು…

2 hours ago