Close-up of golden Bitcoins on a dark reflective surface and the histogram of decreasing crypto in the background SSUCv3H4sIAAAAAAAACpyRwW7DIAyG75P2DhHnVkpCsrZ7lWoHB7wElUIFpNNU9d1nIFScd4niz/Zv//jx/tY0bAKvBPtsHjGiWGm9+uAgKGsIt7uNOzQSXU3ujn+0NUCpgnUKdA0nCGIxcEWCZtU64mdKMh8grB59nL4hAQFn0sjwJZFXPOe4KYmUpA5KMbarmF+nxArK4v/qzD9fxQ3MaMRvWrgy4lAjZCPnXMouPwHdtbYGq1S2cnW3AnQs4JXSzSmhzFy12bCkZy9twq4muLjCa3Omrb3BpOMTf5MmFr6A91QuC68GCTqyvVZzjA3JwKbKJF0ihh3vT+04HI4jXZvz04FvBfl6iyKdtE4RolhclKytq7gBQ44dDB3uj5zz/SCOcg8jffiIYhj7HmTX0sM//wAAAP//AwAGL/o0mAIAAA==
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಮೂಡಿಸಿದ್ದ, ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಂದರ್ಭದಲ್ಲಿ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಹಿನ್ನೆಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಎಸ್ಐಟಿ ಅಧಿಕಾರಿಗಳು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಧರ್ ಪೂಜಾರ್ ಅವರನ್ನು ಇಂದು ವಿಚಾರಣೆಗಾಗಿ ಕರೆಸಿ ತನಿಖಾ ವಿಚಾರಣೆ ಮುಗಿದ ನಂತರ ಸಿಐಡಿ ಕಚೇರಿಯಲ್ಲೇ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ಎಸ್ಐಟಿ ರಚನೆಯಾದ ನಂತರ ಕಾಟನ್ಪೇಟೆ ಠಾಣೆಯಲ್ಲಿ ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಗಳಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಶ್ರೀಧರ್ ವಿರುದ್ಧ ನೂತನ ಎಫ್ಐಆರ್ ದಾಖಲಾಗಿತ್ತು. ಅಲ್ಲದೇ ಇದೇ ಎಸ್ಐಟಿ ತಂಡವೂ ಕಾಟನ್ಪೇಟೆ ಠಾಣೆಯ ಕೇಸ್ಅನ್ನು ಕೂಡ
ತನಿಖೆ ನಡೆಸುತ್ತಿದೆ. ಹೀಗಾಗಿ ಶ್ರೀಧರ್ ಅವರನ್ನು ಬಂಧಿಸಿ ಇಂದೇ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ವಿರುದ್ಧ ವಿಚಾರಣಾ ನ್ಯಾಯಾಲಯ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಿತ್ತು. ಈ ವಾರೆಂಟ್ಅನ್ನು ಪ್ರಶ್ನಿಸಿ ಶ್ರೀಧರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಅರ್ಜಿ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಘೋಷಿತ ಆರೋಪಿ ಎಂಬ ಆದೇಶವನ್ನು ರದ್ದುಪಡಿಸುವಂತೆ ಸೂಚನೆ ನೀಡಲಾಗಿತ್ತು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…