Close-up of golden Bitcoins on a dark reflective surface and the histogram of decreasing crypto in the background SSUCv3H4sIAAAAAAAACpyRwW7DIAyG75P2DhHnVkpCsrZ7lWoHB7wElUIFpNNU9d1nIFScd4niz/Zv//jx/tY0bAKvBPtsHjGiWGm9+uAgKGsIt7uNOzQSXU3ujn+0NUCpgnUKdA0nCGIxcEWCZtU64mdKMh8grB59nL4hAQFn0sjwJZFXPOe4KYmUpA5KMbarmF+nxArK4v/qzD9fxQ3MaMRvWrgy4lAjZCPnXMouPwHdtbYGq1S2cnW3AnQs4JXSzSmhzFy12bCkZy9twq4muLjCa3Omrb3BpOMTf5MmFr6A91QuC68GCTqyvVZzjA3JwKbKJF0ihh3vT+04HI4jXZvz04FvBfl6iyKdtE4RolhclKytq7gBQ44dDB3uj5zz/SCOcg8jffiIYhj7HmTX0sM//wAAAP//AwAGL/o0mAIAAA==
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಮೂಡಿಸಿದ್ದ, ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಂದರ್ಭದಲ್ಲಿ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಹಿನ್ನೆಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಎಸ್ಐಟಿ ಅಧಿಕಾರಿಗಳು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಧರ್ ಪೂಜಾರ್ ಅವರನ್ನು ಇಂದು ವಿಚಾರಣೆಗಾಗಿ ಕರೆಸಿ ತನಿಖಾ ವಿಚಾರಣೆ ಮುಗಿದ ನಂತರ ಸಿಐಡಿ ಕಚೇರಿಯಲ್ಲೇ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ಎಸ್ಐಟಿ ರಚನೆಯಾದ ನಂತರ ಕಾಟನ್ಪೇಟೆ ಠಾಣೆಯಲ್ಲಿ ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಗಳಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಶ್ರೀಧರ್ ವಿರುದ್ಧ ನೂತನ ಎಫ್ಐಆರ್ ದಾಖಲಾಗಿತ್ತು. ಅಲ್ಲದೇ ಇದೇ ಎಸ್ಐಟಿ ತಂಡವೂ ಕಾಟನ್ಪೇಟೆ ಠಾಣೆಯ ಕೇಸ್ಅನ್ನು ಕೂಡ
ತನಿಖೆ ನಡೆಸುತ್ತಿದೆ. ಹೀಗಾಗಿ ಶ್ರೀಧರ್ ಅವರನ್ನು ಬಂಧಿಸಿ ಇಂದೇ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ವಿರುದ್ಧ ವಿಚಾರಣಾ ನ್ಯಾಯಾಲಯ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಿತ್ತು. ಈ ವಾರೆಂಟ್ಅನ್ನು ಪ್ರಶ್ನಿಸಿ ಶ್ರೀಧರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಅರ್ಜಿ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಘೋಷಿತ ಆರೋಪಿ ಎಂಬ ಆದೇಶವನ್ನು ರದ್ದುಪಡಿಸುವಂತೆ ಸೂಚನೆ ನೀಡಲಾಗಿತ್ತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…