Close-up of golden Bitcoins on a dark reflective surface and the histogram of decreasing crypto in the background SSUCv3H4sIAAAAAAAACpyRwW7DIAyG75P2DhHnVkpCsrZ7lWoHB7wElUIFpNNU9d1nIFScd4niz/Zv//jx/tY0bAKvBPtsHjGiWGm9+uAgKGsIt7uNOzQSXU3ujn+0NUCpgnUKdA0nCGIxcEWCZtU64mdKMh8grB59nL4hAQFn0sjwJZFXPOe4KYmUpA5KMbarmF+nxArK4v/qzD9fxQ3MaMRvWrgy4lAjZCPnXMouPwHdtbYGq1S2cnW3AnQs4JXSzSmhzFy12bCkZy9twq4muLjCa3Omrb3BpOMTf5MmFr6A91QuC68GCTqyvVZzjA3JwKbKJF0ihh3vT+04HI4jXZvz04FvBfl6iyKdtE4RolhclKytq7gBQ44dDB3uj5zz/SCOcg8jffiIYhj7HmTX0sM//wAAAP//AwAGL/o0mAIAAA==
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಮೂಡಿಸಿದ್ದ, ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಂದರ್ಭದಲ್ಲಿ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಹಿನ್ನೆಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಎಸ್ಐಟಿ ಅಧಿಕಾರಿಗಳು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಧರ್ ಪೂಜಾರ್ ಅವರನ್ನು ಇಂದು ವಿಚಾರಣೆಗಾಗಿ ಕರೆಸಿ ತನಿಖಾ ವಿಚಾರಣೆ ಮುಗಿದ ನಂತರ ಸಿಐಡಿ ಕಚೇರಿಯಲ್ಲೇ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ಎಸ್ಐಟಿ ರಚನೆಯಾದ ನಂತರ ಕಾಟನ್ಪೇಟೆ ಠಾಣೆಯಲ್ಲಿ ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಗಳಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಶ್ರೀಧರ್ ವಿರುದ್ಧ ನೂತನ ಎಫ್ಐಆರ್ ದಾಖಲಾಗಿತ್ತು. ಅಲ್ಲದೇ ಇದೇ ಎಸ್ಐಟಿ ತಂಡವೂ ಕಾಟನ್ಪೇಟೆ ಠಾಣೆಯ ಕೇಸ್ಅನ್ನು ಕೂಡ
ತನಿಖೆ ನಡೆಸುತ್ತಿದೆ. ಹೀಗಾಗಿ ಶ್ರೀಧರ್ ಅವರನ್ನು ಬಂಧಿಸಿ ಇಂದೇ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ವಿರುದ್ಧ ವಿಚಾರಣಾ ನ್ಯಾಯಾಲಯ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಿತ್ತು. ಈ ವಾರೆಂಟ್ಅನ್ನು ಪ್ರಶ್ನಿಸಿ ಶ್ರೀಧರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಅರ್ಜಿ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಘೋಷಿತ ಆರೋಪಿ ಎಂಬ ಆದೇಶವನ್ನು ರದ್ದುಪಡಿಸುವಂತೆ ಸೂಚನೆ ನೀಡಲಾಗಿತ್ತು.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…