Categories: ರಾಜ್ಯ

ಬಿಜೆಪಿ ನೂರು ಕೋಟಿ ಆಫರ್‌ ಸುಳ್ಳು: ಕೈ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್‌ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 100 ಕೋಟಿ ಆಫರ್‌ ಬಂದಿದೆ ಎಂಬುದು ಸುಳ್ಳು. ಈ ಬಗ್ಗೆ ನನ್ನನ್ನು ಯಾರೂ ಕೂಡ ಸಂಪರ್ಕ ಮಾಡಿಲ್ಲ, ಆಫರ್‌ ಬಂದಿದೆ ಎಂದು ಯಾರ್ ಹೇಳಿದ್ದಾರೆ ಅವರನ್ನೇ ನೀವು ಕೇಳಬೇಕು. ನನಗೆ ಅದರ ಬಗ್ಗೆ ಯಾವ ಮಾಹಿತಿಯೂ ಇಲ್ಲ. ನನ್ನನ್ನು ಈ ಭಾಗದ ಪ್ರಜೆಗಳು ಆಯ್ಕೆ ಮಾಡಿದ್ದಾರೆ. ಆ ಕಾರಣವಾಗಿ ನಾನು ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದರು.

ರಾಜ್ಯದ ಜನತೆ ಆದೇಶದ ಮೇರೆಗೆ ಕಾಂಗ್ರೆಸ್‌ನ 136 ಶಾಸಕರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನಾದೇಶದ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಶಾಸಕರನ್ನು ಕೊಂಡುಕೊಳ್ಳುವ ಬಗ್ಗೆ ಯಾರು ಹೇಳಿದ್ದಾರೋ ಅವರನ್ನೇ ಕೇಳಬೇಕು. ಈ ವಿಚಾರವನ್ನು ಚರ್ಚಿಸುವಷ್ಟು ನಾನು ದೊಡ್ಡ ವ್ಯಕ್ತಿಯಲ್ಲ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

2 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

21 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

44 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

59 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago