Categories: ರಾಜ್ಯ

ಬಿಜೆಪಿ ನೂರು ಕೋಟಿ ಆಫರ್‌ ಸುಳ್ಳು: ಕೈ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್‌ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 100 ಕೋಟಿ ಆಫರ್‌ ಬಂದಿದೆ ಎಂಬುದು ಸುಳ್ಳು. ಈ ಬಗ್ಗೆ ನನ್ನನ್ನು ಯಾರೂ ಕೂಡ ಸಂಪರ್ಕ ಮಾಡಿಲ್ಲ, ಆಫರ್‌ ಬಂದಿದೆ ಎಂದು ಯಾರ್ ಹೇಳಿದ್ದಾರೆ ಅವರನ್ನೇ ನೀವು ಕೇಳಬೇಕು. ನನಗೆ ಅದರ ಬಗ್ಗೆ ಯಾವ ಮಾಹಿತಿಯೂ ಇಲ್ಲ. ನನ್ನನ್ನು ಈ ಭಾಗದ ಪ್ರಜೆಗಳು ಆಯ್ಕೆ ಮಾಡಿದ್ದಾರೆ. ಆ ಕಾರಣವಾಗಿ ನಾನು ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದರು.

ರಾಜ್ಯದ ಜನತೆ ಆದೇಶದ ಮೇರೆಗೆ ಕಾಂಗ್ರೆಸ್‌ನ 136 ಶಾಸಕರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನಾದೇಶದ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಶಾಸಕರನ್ನು ಕೊಂಡುಕೊಳ್ಳುವ ಬಗ್ಗೆ ಯಾರು ಹೇಳಿದ್ದಾರೋ ಅವರನ್ನೇ ಕೇಳಬೇಕು. ಈ ವಿಚಾರವನ್ನು ಚರ್ಚಿಸುವಷ್ಟು ನಾನು ದೊಡ್ಡ ವ್ಯಕ್ತಿಯಲ್ಲ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌…

6 mins ago

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ…

19 mins ago

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ.…

31 mins ago

ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್‌ ಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌…

49 mins ago

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

58 mins ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

1 hour ago