ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 100 ಕೋಟಿ ಆಫರ್ ಬಂದಿದೆ ಎಂಬುದು ಸುಳ್ಳು. ಈ ಬಗ್ಗೆ ನನ್ನನ್ನು ಯಾರೂ ಕೂಡ ಸಂಪರ್ಕ ಮಾಡಿಲ್ಲ, ಆಫರ್ ಬಂದಿದೆ ಎಂದು ಯಾರ್ ಹೇಳಿದ್ದಾರೆ ಅವರನ್ನೇ ನೀವು ಕೇಳಬೇಕು. ನನಗೆ ಅದರ ಬಗ್ಗೆ ಯಾವ ಮಾಹಿತಿಯೂ ಇಲ್ಲ. ನನ್ನನ್ನು ಈ ಭಾಗದ ಪ್ರಜೆಗಳು ಆಯ್ಕೆ ಮಾಡಿದ್ದಾರೆ. ಆ ಕಾರಣವಾಗಿ ನಾನು ಕಾಂಗ್ರೆಸ್ ನೇತೃತ್ವದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದರು.
ರಾಜ್ಯದ ಜನತೆ ಆದೇಶದ ಮೇರೆಗೆ ಕಾಂಗ್ರೆಸ್ನ 136 ಶಾಸಕರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನಾದೇಶದ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವ ಬಗ್ಗೆ ಯಾರು ಹೇಳಿದ್ದಾರೋ ಅವರನ್ನೇ ಕೇಳಬೇಕು. ಈ ವಿಚಾರವನ್ನು ಚರ್ಚಿಸುವಷ್ಟು ನಾನು ದೊಡ್ಡ ವ್ಯಕ್ತಿಯಲ್ಲ ಎಂದು ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…