ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದೆ.
ನ್ಯಾಯಾಲಯ ಬಿಎಸ್ವೈ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಕರಣ ದಾಖಲಾಗಿ ಮೂರು ತಿಂಗಳಾದ ಬಳಿಕ ಬಂಧನದ ವಾರೆಂಟ್ ಏಕೆ? ಇದು ಕಾಂಗ್ರೆಸ್ನ ನೀಚ ರಾಜಕಾರಣದ ಎಂದು ತಿವಿದಿದೆ.
ಎಕ್ಸ್ ಪೋಸ್ಟ್ನಲ್ಲೇನಿದೆ?
https://x.com/BJP4Karnataka/status/1801255878336872946
ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ.
ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ.
ಈ ಹಿಂದೆ ಸ್ವತಃ ಗೃಹ ಸಚಿವ ಪರಮೇಶ್ವರ್ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.
ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ?
ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ?
ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…