ರಾಜ್ಯ

ಬಿಎಸ್‌ವೈ ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ ನಿರ್ನಾಮವಾಗಲಿದೆ: ಬಿಜೆಪಿ

ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್‌ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರ ಹಾಕಿದೆ.

ನ್ಯಾಯಾಲಯ ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ತಮ್ಮ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಕರಣ ದಾಖಲಾಗಿ ಮೂರು ತಿಂಗಳಾದ ಬಳಿಕ ಬಂಧನದ ವಾರೆಂಟ್‌ ಏಕೆ? ಇದು ಕಾಂಗ್ರೆಸ್‌ನ ನೀಚ ರಾಜಕಾರಣದ ಎಂದು ತಿವಿದಿದೆ.

ಎಕ್ಸ್‌ ಪೋಸ್ಟ್‌ನಲ್ಲೇನಿದೆ?

https://x.com/BJP4Karnataka/status/1801255878336872946

ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ.

ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಬಿಎಸ್‌ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ.

ಈ ಹಿಂದೆ ಸ್ವತಃ ಗೃಹ ಸಚಿವ ಪರಮೇಶ್ವರ್‌ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.

ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ?
ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ?

ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago