ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಕಕ ಸರ್ಕಾರ ಅಂದರೆ ಕಮಿಷನ್, ಕಲೆಕ್ಷನ್, ಕರೆಪ್ಶನ್ ಕಾಂಗ್ರೆಸ್ ಸರ್ಕಾರ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಕಿಡಿಕಾರಿದೆ.
ಲೈಸೆನ್ಸ್, ಲೈಸೆನ್ಸ್ ವರ್ಗಾವಣೆ, ಲೆಸೆನ್ಸ್ ನವೀಕರಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಥವಾ ಇವರ ಪುತ್ರನಿಗೆ ಲಂಚ ನೀಡಲೇ ಬೇಕಿದೆ. ಸಿಎಂ ಸಿದ್ದರಾಮಯ್ಯ ಅವರೇ, ಈ “ಕಕಕ” ದಲ್ಲಿ ನಿಮಗೆಷ್ಟು ಪಾಲು? ಎಂದು ಪ್ರಶ್ನಿಸಿದೆ.
ಭಾರತದಲ್ಲಿಯೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಂಬರ್ 1 ಭ್ರಷ್ಟ ಸರ್ಕಾರ ಎಂಬ ಕುಖ್ಯಾತಿ ಪಡೆದಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, ಭ್ರಷ್ಟ ಹಾಗೂ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬರ್ 1 ಭ್ರಷ್ಟ ಸರ್ಕಾರ ಎಂಬ ಪಾರಿತೋಷಕ ನೀಡಿ ಅಭಿನಂದಿಸಿದರು ಎಂದು ವ್ಯಂಗ್ಯ ಮಾಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…