ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಕಕ ಸರ್ಕಾರ ಅಂದರೆ ಕಮಿಷನ್, ಕಲೆಕ್ಷನ್, ಕರೆಪ್ಶನ್ ಕಾಂಗ್ರೆಸ್ ಸರ್ಕಾರ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಕಿಡಿಕಾರಿದೆ.
ಲೈಸೆನ್ಸ್, ಲೈಸೆನ್ಸ್ ವರ್ಗಾವಣೆ, ಲೆಸೆನ್ಸ್ ನವೀಕರಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಥವಾ ಇವರ ಪುತ್ರನಿಗೆ ಲಂಚ ನೀಡಲೇ ಬೇಕಿದೆ. ಸಿಎಂ ಸಿದ್ದರಾಮಯ್ಯ ಅವರೇ, ಈ “ಕಕಕ” ದಲ್ಲಿ ನಿಮಗೆಷ್ಟು ಪಾಲು? ಎಂದು ಪ್ರಶ್ನಿಸಿದೆ.
ಭಾರತದಲ್ಲಿಯೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಂಬರ್ 1 ಭ್ರಷ್ಟ ಸರ್ಕಾರ ಎಂಬ ಕುಖ್ಯಾತಿ ಪಡೆದಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, ಭ್ರಷ್ಟ ಹಾಗೂ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬರ್ 1 ಭ್ರಷ್ಟ ಸರ್ಕಾರ ಎಂಬ ಪಾರಿತೋಷಕ ನೀಡಿ ಅಭಿನಂದಿಸಿದರು ಎಂದು ವ್ಯಂಗ್ಯ ಮಾಡಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…