ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕೆ ಮಾಡಿದೆ. ಅಲ್ಲದೆ ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ತಮದಮ ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನ ಒಪ್ಪಿಕೊಳ್ಳದ ಸಿಎಂ, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…