ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕೆ ಮಾಡಿದೆ. ಅಲ್ಲದೆ ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ತಮದಮ ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನ ಒಪ್ಪಿಕೊಳ್ಳದ ಸಿಎಂ, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…