ಯಾದಗಿರಿ: ಕಾಂಗ್ರೆಸ್ನ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಉಪ ಚುನಾವಣೆ ನಡೆಯಲಿದೆ. ಕ್ಷೇತ್ರದ ಉಪ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ.
ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಾಜುಗೌಡ, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್ನಿಂದಲೇ ಗೆದ್ದಿದ್ದಾರೆ. ಕಾಂಗ್ರೆಸ್ಗೆ ಇಷ್ಟು ಸೀಟು ಬಂದಿವೆ. ಸಿದ್ದರಾಮಯ್ಯ ಸಾಹೇಬರನ್ನ ಇಳಿಸಿದರೆ ಸರ್ಕಾರ ಉಳಿಯಲ್ಲ. ಗೃಹಲಕ್ಷ್ಮೀ ಹಣ 3 ತಿಂಗಳಿಗೋ 6 ತಿಂಗಳಿಗೋ ಬರುತ್ತೆ. ನಾನು ಗೆದ್ರೆ ಸಿಎಂ ಸಿದ್ದರಾಮಯ್ಯ ಸಾಹೇಬರ ಬಳಿ ಮಾತಾನಾಡಿ ಹಣ ಹಾಕಿಸ್ತೇನೆ. ಕಾಂಗ್ರೆಸ್ನವರು ಗೆದ್ರೆ ಸಿದ್ದರಾಮಯ್ಯರ ಮುಂದೆ ಮಾತಾಡಲ್ಲ. ಸಿದ್ದರಾಮಯ್ಯನವರು ಹೇ ಅಂದ್ರೆ ಅವರು ಸುಮ್ಮನಾಗುತ್ತಾರೆ. ನಾನಾದರೆ ಅಣ್ಣಾ ಅಂತ ಹೇಳಿ ಕೆಲಸವನ್ನು ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…