ಯಾದಗಿರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಖುರ್ಚಿ ಮೇಲೆ ಕಣ್ಣಿದ್ದು, ಅದನ್ನು ಪಡೆಯಲು ಡಿಕೆ ಅವರು ಏನು ಬೇಕಾದರೂ ಮಾಡಬಹುದು? ಲೋಕಸಭಾ ಚುನಾವಣೆ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಅಥವಾ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಿಡಿ ಬಿಡಬಹುದು ಎಂದು ಸೂರಪುರ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜುಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹುಣಸಗಿ ಪಟ್ಟಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿಎಂ ಖುರ್ಚಿ ಮೇಲೆ ಡಿಕೆಶಿಗೆ ಕಣ್ಣಿದೆ ಸಿಎಂ ಸಿದ್ದರಾಮಯ್ಯ ಅಣ್ಣನವರೆ ಹುಷಾರಾಗಿರಿ ಡಿಕೆ ಶಿವಕುಮಾರ್ ಅವರು ಸಿಡಿ ತಯಾರಿಸುವುದರಲ್ಲಿ ನಿಸ್ಸೀಮರು. ಇಂತವರನ್ನು ಪಕ್ಕದಲ್ಲಿಟ್ಟುಕೊಂಡು ಓಡಾಡಬೇಡಿ ಜಾರಕಿಹೋಳಿ ಸಿಡಿ ಅವರ ಮನೆಗೆ ಕಳುಹಿಸಿದ ಡಿಕೆ ಶಿವಕುಮಾರ್ ನಿಮಗೆ ಯಾವತ್ತೂ ಒಳ್ಳೆಯದನ್ನು ಮಾಡುವುದಿಲ್ಲ. ನಿಮ್ಮ ಖುರ್ಚಿ ಮೇಲೆ ಡಿಕೆ ಕಣ್ಣಿದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಲು ಸಿದ್ದರಿದ್ದಾರೆ ಎಂದು ಎಚ್ಚರಿಸಿದರು.
ತಮ್ಮ ರಾಜಕೀಯ ಎದುರಾಳಿಗಳನ್ನು ಮುಗಿಸಲು ಡಿಕೆಶಿ ಪೆನ್ಡ್ರೈವ್ ಯೂನಿವರ್ಸಿಟಿ ತೆಗೆದಿದ್ದಾರೆ. ಯಾರನ್ನು ಹೇಗೆ ಬಗ್ಗು ಬಡಿಯಬೇಕು ಎಂಬ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿದೆ. ಕೆಲವರಿಗೆ ಬೆದರಿಕೆ ಅಸ್ತ್ರ ಹೂಡಿದರೇ, ಮತ್ತೆ ಕೆಲವರಿಗೆ ಸಿಡಿ ಅಸ್ತ್ರ ಹೂಡುತ್ತಾರೆ. ಅಗತ್ಯಬಿದ್ದರೇ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಡಿ ಅಸ್ತ್ರ ಬಳಸಲಿದ್ದಾರೆ ಎಂದು ಕಿಡಿಕಾರಿದರು.
ಪೆನ್ಡ್ರೈವ್ ವಿಚಾರದ ಬಗ್ಗೆ ಮೊದಲೇ ತಿಳಿದಿದ್ದ ಡಿಕೆಶಿ ಮತ್ಯಾಕೆ ವಿಚಾರ ಪ್ರಸ್ತಾಪಿಸಿಲ್ಲ. ಅವರಿಗೆ ಶಿಕ್ಷೆ ಕೊಡಿಸುವುದಕ್ಕಿಂತ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದೇ ಮುಖ್ಯವಾಗಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…