ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದೆ
ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕಾಂಗ್ರೆಸ್ ಈ ಮೂರು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಪ್ರಕಟವಾಗುವ ಹಲವಾರು ಕನ್ನಡ, ಇಂಗ್ಲಿಷ್ ದಿನಪತ್ರಿಕೆಗಳಲ್ಲಿ ʼನುಡಿದಂತೆ ನಡೆದಿದ್ದೇವೆʼ ಎಂಬ ಶೀರ್ಷಿಕೆ ಅಡಿಯಲ್ಲಿ ಜಾಹೀರಾತು ಪ್ರಕಟಿಸಿದೆ ಎಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ.
ಜಾಹೀರಾತಿನಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೋಟೊಗಳನ್ನು ಬಳಸಲಾಗಿದ್ದು, ಸರ್ಕಾರದ ಸಾಧನೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆ ಸರ್ಕಾರವೇ ಖರ್ಚು ಮಾಡಿದೆ. ಅಕ್ಟೋಬರ್ 15ರಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಈ ಜಾಹೀರಾತು ಅಕ್ಟೋಬರ್ 17ರಂದು ಪ್ರಕಟವಾಗಿದೆ ಎಂದೂ ಸಹ ಹೇಳಿದೆ.
ಜನರ ದುಡ್ಡಿನಲ್ಲಿ ಜಾಹೀರಾತು ಪ್ರಕಟಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ನೋಟಿಸ್ ಜಾರಿ ಮಾಡಬೇಕು ಅಲ್ಲದೇ ಜನರನ್ನು ತಪ್ಪುದಾರಿಗೆಳೆಯುವ ಇಂತಹ ಜಾಹೀರಾತುಗಳನ್ನು ಮತ್ತೊಮ್ಮೆ ಪ್ರಕಟಿಸದಂತೆ ನಿರ್ಬಂಧ ಹೇರಬೇಕು. ನೀತಿ ಸಂಹಿತೆ ಉಲ್ಲಂಘನೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…