ಕಲಬುರಗಿ: ‘ನನ್ನ ಗುರಿ ನಿಜವಾಗಿಯೂ ಕಲ್ಯಾಣ ಕರ್ನಾಟಕ ಮಾಡುವುದಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371ಜೆ ಸ್ಥಾನಮಾನ ತಂದು ಕೊಟ್ಟಿದ್ದೇನೆ. ಈ ಮೂಲಕ ಸಂವಿಧಾನದ ಪುಸ್ತಕದಲ್ಲಿ ಕಲಬುರಗಿ ಹೆಸರು ಸೇರಿಸಿದ್ದೇನೆ. ಆದರೆ ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಕೊಡುಗೆ ಶೂನ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲಬುರಗಿಯಲ್ಲಿ ನಡೆದ ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಈವರೆಗೆ ಕಾಂಗ್ರೆಸ್ ದೇಶಾದ್ಯಂತ 25 ಗ್ಯಾರೆಂಟಿಗಳನ್ನು ಈಡೇರಿಸುವ ಭರವಸೆ ನೀಡುತ್ತೇವೆ. ಎಲ್ಲೇ ಕೇಳಿದರೂ ನಾನು ಒಳ್ಳೇ ಕೆಲಸ ಮಾಡಿದ್ದೇನೆ ಎಂದು ನೀವೇ ಹೇಳುತ್ತೀರಾ, ಆದರೆ ಮತಗಟ್ಟೆಗೆ ಹೋದಾಗ ನಮ್ಮನ್ನೇ ಮರೆತು ಬಿಡುತ್ತೀರಾ ಎಂದು ಬೇಸರ ವ್ಯಕ್ತಪಡಿಸಿದರು.
ಈ ಬಾರಿ ಕಾಂಗ್ರೆಸ್ನ ರಾಧಾಕೃಷ್ಣಗೆ ಮತ ನೀಡಿ ಮತ್ತೆ ಮುಂದಿನ ಐದು ವರ್ಷಗಳಲ್ಲಿ ಕಲಬುರಗಿ ಬದಲಾವಣೆ ನೋಡಿ. ನಾನಿನ್ನು ಸತ್ತಿಲ್ಲ, ಜನರ ಸೇವೆ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಭಾವುಕರಾದರು.
ಕಲ್ಬುರ್ಗಿಯಲ್ಲಿ ಕೇಂದ್ರಿಯ ವಿಶ್ವ ವಿದ್ಯಾಲಯ, ಇಎಸ್ಐ, ಜವಳಿ ಪಾರ್ಕ್, ನ್ಯಾಷನಲ್ ಹೈವೇ ಎಲ್ಲವನ್ನು ಮಾಡಿದ್ದೇನೆ. ಆದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿಯವರ ಕೊಡುಗೆ ಶೂನ್ಯವಾಗಿದೆ. ಈ ಚುನಾವಣೆ ಕೇವಲ ರಾಧಕೃಷ್ಣ ಎಲೆಕ್ಷನ್ ಅಲ್ಲ, ಬದಲಾಗಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ಚುನಾವಣೆಯಾಗಿದೆ. ಪ್ರಧಾನಿ ಮೋದಿ ಅವರು ಮಿಷನರಿ ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…