ಬೆಂಗಳೂರು: ರಾಜ್ಯ ಬಿಜೆಪಿ ಘಟಕದೊಳಗೆ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸಲು ರಾಜ್ಯಕ್ಕೆ ಆಗಮಿಸಿದ್ದ ಉಸ್ತುವಾರಿ ರಾಧಾಮೋಹನ್ ದಾಸ್ ಎದುರೇ ಇಬ್ಬರು ಪ್ರಭಾವಿ ನಾಯಕರು ಜಟಾಪಟಿ ನಡೆಸಿ ಮಾತಿಗೆ ಮಾತು ಬೆಳೆಸಿರುವ ಘಟನೆ ನಡೆದಿದೆ.
ಪಕ್ಷದ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ಸಹ ಉಸ್ತುವಾರಿ ಸುಧಾಕರ್ ಸೇರಿದಂತೆ ಕೋರ್ ಕಮಿಟಿಯ ಸದಸ್ಯರಾದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಬಸವರಾಜ ಬೊಮಾಯಿ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.
ಸಭೆಯ ಮಧ್ಯೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ನಡುವೆ ಜಟಾಪಟಿ ನಡೆದು ಮಾತಿಗೆ ಮಾತು ಬೆಳೆದಿದೆ.
ಒಂದು ಹಂತದಲ್ಲಿ ಏಕವಚನ ಪದ ಪ್ರಯೋಗ ಬಳಸಿದ ಇಬ್ಬರು ನಾಯಕರೂ ಸಭೆಯಿಂದ ಹೊರ ನಡೆಯಲು ಮುಂದಾದಾಗ ಮಧ್ಯಪ್ರವೇಶ ಮಾಡಿದ ಅಶೋಕ್ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಕೊನೆಗೆ ವಿಜಯೇಂದ್ರ ಮತ್ತು ಅಶ್ವತ್ಥ ನಾರಾಯಣ ಅವರಿಂದ ಬೇಸತ್ತ ರಾಧಾಮೋಹನ್ ದಾಸ್ ಮೌನವಾಗಿರುವಂತೆ ತಾಕೀತು ಮಾಡಿದರು.
ಇನ್ನು ಸಭೆಯಲ್ಲಿ ಮಾಜಿ ಸಂಸದ ಶ್ರೀರಾಮುಲುಗೆ ರಾಧಾ ಮೋಹನ್ ದಾಸ್ ಕ್ಲಾಸ್ ತೆಗೆದುಕೊಂಡಿರುವ ವಿಚಾರ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಂಗಾರು ಹನುಮಂತು ಸೋಲಿನ ಕುರಿತು ಸುದೀರ್ಘ ಚರ್ಚೆ ನಡೆಯಿತು. ಈ ವೇಳೆ ರಾಧಾ ಮೋಹನ್ ದಾಸ್ ಅವರು ಶ್ರೀರಾಮುಲು ಅವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನೀವು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಸರಿಯಾಗಿ ಕಾರ್ಯನಿರ್ವಹಣೆ ಮಾಡಿಲ್ಲ ಎಂಬ ದೂರು ಬಂದಿದೆ. ಇದಕ್ಕೆ ಉತ್ತರಿಸಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಈ ವೇಳೆ ಶ್ರೀರಾಮುಲು ಅವರು ಬೇಸರದಿಂದಲೇ ಬಿಜೆಪಿ ಕಚೇರಿಯಿಂದ ಹೊರಟ ಘಟನೆ ಕೂಡ ನಡೆದಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…