ರಾಜ್ಯ

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.

ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ಧುರ್ಯೋದನ ಐಹೊಳೆ, ಬಸವರಾಜ್ ಮತ್ತಿಮಡು, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಮತ್ತಿತರ ನಿಯೋಗವು ಲೋಕ ಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಮನವಿ ಮಾಡಿಕೊಂಡಿತು.

ಸುಮಾರು 20 ನಿಮಿಷಗಳ ಕಾಲ ನಡೆದ ಮಾತುಕತೆ ಸಂದರ್ಭದಲ್ಲಿ ಒಳಮೀಸಲಾತಿ ಸಂಬಂಧ ಸರ್ಕಾರ ಕಳುಹಿಸಿರುವ ಮಸೂದೆ ಕುರಿತು ಯಾವುದಾದರೊಂದು ನಿರ್ಧಾರ ತೆಗೆದುಕೊಳ್ಳಬೇಕು. ಈ ಮಸೂದೆ ಕಾರ್ಯರೂಪಕ್ಕೆ ಬಂದರೆ ಸಮುದಾಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ತೀರ್ಪು ಬಂದು 18 ತಿಂಗಳಾಗಿದೆ. ಪಕ್ಕದ ತೆಲಂಗಾಣ, ಆಂಧ್ರಪ್ರದೇಶ, ದೂರದ ಹರ್ಯಾಣ ಸರ್ಕಾರಗಳು ಆರೇ ತಿಂಗಳಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಿ ನ್ಯಾಯ ಕೊಟ್ಟವು. ಆದರೆ ಕರ್ನಾಟಕದಲ್ಲಿ ಇನ್ನೂ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು ರಾಜ್ಯಪಾಲರಲ್ಲಿ ಬೇಸರ ಹೊರಹಾಕಿದರು.

ನ್ಯಾಯಮೂರ್ತಿ ನಾಗ ಮೋಹನ್‍ದಾಸ್ ಆಯೋಗ ರಚನೆ ಮಾದಿಗ ಸಮಾಜದ ಬೇಡಿಕೆ ಆಗಿರಲಿಲ್ಲ. ಈ ಹಿಂದೆ ತಯಾರಿಸಿದ ಸದಾಶಿವ ಆಯೋಗದ ವರದಿ ಮತ್ತು ಮಾಧುಸ್ವಾಮಿ ಸಮಿತಿ ವರದಿಯ ದತ್ತಾಂಶಗಳು ಸರ್ಕಾರದ ಬಳಿ ಇದ್ದವು. ಆದರೂ ಸರ್ಕಾರ ನಾಗಮೋಹನ ದಾಸ್ ಆಯೋಗ ರಚಿಸಿ ವರದಿ ಪಡೆಯಲು ನಿಶ್ಚಯಿಸಿತು. ಆರು ತಿಂಗಳು ಶ್ರಮವಹಿಸಿ, 110 ಕೋಟಿ ತೆರಿಗೆ ಹಣ ವ್ಯಯಿಸಿ ಆಯೋಗದಿಂದ ಶಿಫಾರಸುಗಳನ್ನು ಪಡೆಯಲಾಯಿತು ಎಂದು ನಿಯೋಗ ವಿವರಿಸಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago