ಬೆಂಗಳೂರು: ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ
ಚುನಾವಣೆಗೂ ಮೊದಲು ಅವೈಜ್ಞಾನಿಕವಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಬಲದಿಂದ ಅಧಿಕಾರಕ್ಕೆ ಬಂದು, ಬಳಿಕ ಕಂಡಿಷನ್ ಅಪ್ಲೈ ಎಂಬ ನಿಯಮದಡಿ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಈಗ ಆ ಗ್ಯಾರಂಟಿಗಳನ್ನು ಸಹ ಹಣಕಾಸಿನ ಕೊರತೆಯಿಂದ ನಿಂತಿದೆ ಎಂದು ಸ್ವತಃ ಸಚಿವರೇ ಹೇಳಿದ್ದಾರೆ ಎಂದು ಲೇವಡಿ ಮಾಡಿದೆ.
ಗ್ಯಾರಂಟಿ ಯೋಜನೆಗಳನ್ನು ನೀಡಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ಈಗ ರಾಜ್ಯ ಸರ್ಕಾರದ ಖಜಾನೆ ಸಹ ಖಾಲಿಯಾಗಿ ನಾಲ್ಕೈದು ತಿಂಗಳಿನಿಂದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಯಾಗಿಲ್ಲ. ಅದಕ್ಕೆಲ್ಲಾ ಕಾಂಗ್ರೆಸ್ ಪಕ್ಷದ ದುರಾಡಳಿತವೇ ಕಾರಣವಾಗಿದ್ದು, ಸರ್ಕಾರದ ಬೊಕ್ಕಸ ಬರಿದಾಗಿದೆ ಆರೋಪಿಸಿದೆ.
ರಾಜ್ಯದಲ್ಲಿ ಅಭಿವೃದ್ಧಿ ಬಿಡಿ, ಸರ್ಕಾರ ನಡೆಸಲು, ಇಲಾಖೆಯ ಸಿಬ್ಬಂದಿಗಳ ವೇತನಗಳನ್ನು ಪಾವತಿಸಲು ಸಿಎಂ ಸಿದ್ದರಾಮಯ್ಯದ ಸರ್ಕಾರದ ಬಳಿ ದುಡ್ಡಿಲ್ಲ. ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…