ಹುಬ್ಬಳ್ಳಿ: 500 ರೂ ಮುಖಬೆಲೆಯ ನೋಟುಗಳ ಮೇಲೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯ ಮಾಡಿದೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, 500 ರೂ ಮುಖಬೆಲೆಯ ನೋಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಾಕಬೇಕು ಎನ್ನುವ ಆಗ್ರಹ ಮೊದಲಿನಿಂದಲೂ ಇದೆ. ಇದೇ ಏಪ್ರಿಲ್.14ರ ಅಂಬೇಡ್ಕರ್ ಅವರ ಜನ್ಮದಿನದ ಒಳಗೆ ಈ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಮನವಿ ಮಾಡಿದರು.
ಏಪ್ರಿಲ್.14ರಂದು ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಮೊದಲು ಈ ನಿರ್ಧಾರ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತರುವಂತೆ ಮನವಿ ಮಾಡಿದರು.
ನೋಟುಗಳ ಮೇಲೆ ಅಂಬೇಡ್ಕರ್ ಅವರ ಚಿತ್ರವನ್ನು ನೋಡುವುದು ದಲಿತ ಸಮುದಾಯಗಳಿಗಷ್ಟೇ ಅಲ್ಲ. ಇಡೀ ದೇಶಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಗಳನ್ನು ಸ್ಮರಿಸುವ ಇತರರ ಬಹುದಿನಗಳ ಕನಸಾಗಿದೆ. ಇದಲ್ಲದೇ ಅಂಬೇಡ್ಕರ್ ಅವರನ್ನು ಭಾರತದಲ್ಲಿ ಮಾತ್ರವಲ್ಲದೇ 150 ದೇಶಗಳ ಜನರೂ ಕೂಡ ಗೌರವಿಸುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಸಂಸತ್ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮಾತನಾಡಿದ್ದು ಹಿಂದಿಯಲ್ಲಿ. ಈ ಭಾಷೆ ಅರ್ಥವಾಗದವರು ಬೀದಿಗೆ ಇಳಿದಿದ್ದಾರೆ. ಮೊದನಿನಂತಹ ಸಂಘಟನೆಗಳು ಈಗ ಇಲ್ಲ. ಈಗಿರುವುದೆಲ್ಲಾ ಹೊಟ್ಟೆಪಾಡಿನ ಸಂಘಟನೆಗಳು. ಅವರೆಲ್ಲ ಅಂಬೇಡ್ಕರ್ ಅವರ ಗುರುತಿನ ಚೀಟಿಯಷ್ಟೇ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…