ಬೆಂಗಳೂರು: ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶೋಕಾಸ್ ನೋಟಿಸ್ಗೆ ಉತ್ತರ ಕೊಟ್ಟಿದ್ದು, ಮೊದಲ ನೋಟಿಸ್ ಉತ್ತರದಲ್ಲಿದ್ದ ಹಳೆಯ ಕಥೆಯನ್ನೇ ಎರಡನೇ ನೋಟಿಸ್ ಉತ್ತರದಲ್ಲೂ ಹೇಳಿದ್ದಾರೆ. ಪರಿಣಾಮ ಯತ್ನಾಳ್ ಉತ್ತರವನ್ನು ಕೇಂದ್ರೀಯ ಶಿಸ್ತು ಸಮಿತಿ ಒಪ್ಪದೇ ಪೆಂಡಿಂಗ್ನಲ್ಲಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕೇಂದ್ರೀಯ ಶಿಸ್ತು ಸಮಿತಿ ಕೊಟ್ಟಿದ್ದ ಶೋಕಾಸ್ ನೋಟಿಸ್ಗೆ ಕೊಟ್ಟ ಉತ್ತರ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಯತ್ನಾಳ್ ಕಳೆದ ವರ್ಷದ ಡಿಸೆಂಬರ್.1ರಂದು ಮೊದಲ ಶೋಕಾಸ್ ನೋಟಿಸ್ ಹಾಗೂ ಕಳೆದ ಫೆಬ್ರವರಿ.10ರಂದು 2ನೇ ಶೋಕಾಸ್ ನೋಟಿಸ್ ಕೊಡಲಾಗಿತ್ತು. ಆದರೆ ಯತ್ನಾಳ್ ಅವರು, ಮೊದಲ ನೋಟಿಸ್ಗೆ ಕೊಟ್ಟಿದ್ದ ಉತ್ತರವನ್ನೇ ಪುನರಾವರ್ತಿಸಿ ಎರಡನೇ ನೋಟಿಸ್ಗೂ ಕೊಟ್ಟಿದ್ದಾರೆ. ಮೊದಲ ನೋಟಿಸ್ಗೆ ಕೊಟ್ಟಿದ್ದ ಉತ್ತರದಲ್ಲಿ ವಿಜಯೇಂದ್ರ ಯಡಿಯೂರಪ್ಪ ಕುಟುಂಬ ರಾಜಕಾರಣ, ಏಕಪಕ್ಷೀಯ ನಡೆ, ಸ್ವಂತ ತಂಡ, ಹಿರಿಯರ ಕಡೆಗಣನೆ, ಹೋರಾಟ ವೈಫಲ್ಯ, ಹೊಂದಾಣಿಕೆ ರಾಜಕೀಯಗಳ ಬಗ್ಗೆ ಯತ್ನಾಳ್ ಆರೋಪಿಸಿದ್ದರು. ಇದೆಲ್ಲವೂ ವರಿಷ್ಠರ ಗಮನದಲ್ಲಿದ್ದರೂ ಉತ್ತರದಲ್ಲಿ ಮತ್ತೆ ಹಳೇ ಕತೆ ಹೇಳಿದ ಯತ್ನಾಳ್ ಅಸಲಿ ಸ್ಪಷ್ಟನೆ ಕೊಟ್ಟಿಲ್ಲ ಎನ್ನಲಾಗಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…