ಬೆಂಗಳೂರು: ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶೋಕಾಸ್ ನೋಟಿಸ್ಗೆ ಉತ್ತರ ಕೊಟ್ಟಿದ್ದು, ಮೊದಲ ನೋಟಿಸ್ ಉತ್ತರದಲ್ಲಿದ್ದ ಹಳೆಯ ಕಥೆಯನ್ನೇ ಎರಡನೇ ನೋಟಿಸ್ ಉತ್ತರದಲ್ಲೂ ಹೇಳಿದ್ದಾರೆ. ಪರಿಣಾಮ ಯತ್ನಾಳ್ ಉತ್ತರವನ್ನು ಕೇಂದ್ರೀಯ ಶಿಸ್ತು ಸಮಿತಿ ಒಪ್ಪದೇ ಪೆಂಡಿಂಗ್ನಲ್ಲಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕೇಂದ್ರೀಯ ಶಿಸ್ತು ಸಮಿತಿ ಕೊಟ್ಟಿದ್ದ ಶೋಕಾಸ್ ನೋಟಿಸ್ಗೆ ಕೊಟ್ಟ ಉತ್ತರ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಯತ್ನಾಳ್ ಕಳೆದ ವರ್ಷದ ಡಿಸೆಂಬರ್.1ರಂದು ಮೊದಲ ಶೋಕಾಸ್ ನೋಟಿಸ್ ಹಾಗೂ ಕಳೆದ ಫೆಬ್ರವರಿ.10ರಂದು 2ನೇ ಶೋಕಾಸ್ ನೋಟಿಸ್ ಕೊಡಲಾಗಿತ್ತು. ಆದರೆ ಯತ್ನಾಳ್ ಅವರು, ಮೊದಲ ನೋಟಿಸ್ಗೆ ಕೊಟ್ಟಿದ್ದ ಉತ್ತರವನ್ನೇ ಪುನರಾವರ್ತಿಸಿ ಎರಡನೇ ನೋಟಿಸ್ಗೂ ಕೊಟ್ಟಿದ್ದಾರೆ. ಮೊದಲ ನೋಟಿಸ್ಗೆ ಕೊಟ್ಟಿದ್ದ ಉತ್ತರದಲ್ಲಿ ವಿಜಯೇಂದ್ರ ಯಡಿಯೂರಪ್ಪ ಕುಟುಂಬ ರಾಜಕಾರಣ, ಏಕಪಕ್ಷೀಯ ನಡೆ, ಸ್ವಂತ ತಂಡ, ಹಿರಿಯರ ಕಡೆಗಣನೆ, ಹೋರಾಟ ವೈಫಲ್ಯ, ಹೊಂದಾಣಿಕೆ ರಾಜಕೀಯಗಳ ಬಗ್ಗೆ ಯತ್ನಾಳ್ ಆರೋಪಿಸಿದ್ದರು. ಇದೆಲ್ಲವೂ ವರಿಷ್ಠರ ಗಮನದಲ್ಲಿದ್ದರೂ ಉತ್ತರದಲ್ಲಿ ಮತ್ತೆ ಹಳೇ ಕತೆ ಹೇಳಿದ ಯತ್ನಾಳ್ ಅಸಲಿ ಸ್ಪಷ್ಟನೆ ಕೊಟ್ಟಿಲ್ಲ ಎನ್ನಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…