ರಾಜ್ಯ

ಸೌಹರ್ದ ಕದಡುವ ಬಿಜೆಪಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಆರೋಪ

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು‌.

ಇದನ್ನೂ ಓದಿ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿಗೆ ಗೊತ್ತಾ?

ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ
ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ‌ ಪ್ರತಿಕ್ರಿಯಿಸಿದ ಸಚಿವರು, ಅವರು ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ದ್ವೇಷ ಪೂರಿತ ಭಾಷಣವನ್ನು ‌ಬಿಜೆಪಿ- ಕಾಂಗ್ರೆಸ್ ನಾಯಕರು ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕಾಂಗ್ರೆಸ್ಸಿಗರು ಮಾತನಾಡಿದರು ಕ್ರಮ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಅಲ್ವಾ!? ಶಾಂತಿಯನ್ನು ಕದಡುವ ಕೆಲಸ ಮಾಡಿದರೆ ಖಂಡಿತ ಎಫ್ ಐ ಆರ್ ಆಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ
ನಾನು‌ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ, ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ, ಬಹಳಷ್ಟು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ. ಏನೆಲ್ಲಾ ಷಡ್ಯಂತ್ರ ಆಗಿದೆ, ಇದೆಲ್ಲಾ ಹೊರ ಬರುತ್ತೆ ಸ್ವಲ್ಪ ಕಾಯಿರಿ. ಎಸ್ಐಟಿ ತನ್ನ ಕೆಲಸ ಮಾಡುತ್ತಿದೆ. ಇದನ್ನು ಸಾರ್ವಜನಿಕವಾಗಿ ಹೇಳಲು ಬರಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago