ರಾಜ್ಯ

ದೇಶ ಭಕ್ತಿಯನ್ನು ನಮಗೆ ಬಿಜೆಪಿಯವರು ಹೇಳಿ ಕೊಡಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ವಿದಾನಸಭೆ ಆವರಣದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಎಫ್​ಎಸ್​ಎಲ್ ವರದಿ ಬಹಿರಂಗ ಪಡಿಸುವಂತೆ ವಿಪಕ್ಷ ನಾಯಕರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿ, ವರದಿ ಬಂದ ಕೂಡಲೇ ಬಹಿರಂಗ ಮಾಡುತ್ತೇವೆ. ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇದ್ದರೆ ಅಂತಹವರ ಕಠಿಣವಾದ ಕ್ರಮ ಕೈಗೊಳ್ಳುತ್ತೇವೆ.

ದೇಶ ಭಕ್ತಿಯನ್ನು ನಮಗೆ ಬಿಜೆಪಿಯವರು ಹೇಳಿ ಕೊಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದೇಶ ಭಕ್ತಿ ಹೇಳಿ ಕೊಡಬೇಕಾ? ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಯಾರು? ಅವರು ರಾಜಕೀಯಕ್ಕೋಸ್ಕರ ಏನೋ ಹೇಳ್ತಾರೆ, ಅದು ಬೇರೆ ವಿಚಾರ. ಅವರು ಏನಾದರೂ ಆ ತರ ಕೂಗಿದ್ರೆ ಕಠಿಣವಾದ ಕ್ರಮ ತೆಗೆದುಕೊಳ್ತೇವೆ ಎಂದು ಸಿದ್ದರಾಮಯ್ಯ ಗುಡುಗಿದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಷ್ಟೊಂದು ಗೊಂದಲ ಇಲ್ಲ ಹಾಸನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಲೋಕಸಭಾ ಅಭ್ಯರ್ಥಿಗಳ ಪಟ್ಟಿ ತಕ್ಷಣ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ಮಾಡಲು ಸಮಸ್ಯೆ ಏನು ಇಲ್ಲ ಎಂದು ಅವರು ಹೇಳಿದರು.

andolana

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

51 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

55 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

58 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago