veerappa moily
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ. ಅದಕ್ಕಾಗಿ ಪದೇಪದೇ ಕೆಲ ವಿಚಾರಗಳನ್ನು ಕೆಣಕುತ್ತಿದ್ದಾರೆ ಎಂದು ಟೀಕಿಸಿದರು.
ನೀರಿನಲ್ಲಿ ಮುಳುಗುವ ಮನುಷ್ಯನಿಗೆ ಒಂದು ಹುಲ್ಲು ಕಡ್ಡಿಯೂ ಆಶ್ರಯವಾಗುತ್ತದೆ. ಅದೇ ರೀತಿ ಬಿಜೆಪಿಯವರಿಗೆ ಈಗ ಧರ್ಮಸ್ಥಳದ ವಿವಾದ ಬೇಕಾಗಿದೆ. ಅದು ಪೂರ್ಣ ಇತ್ಯರ್ಥಗೊಳ್ಳುವುದು ಬಿಜೆಪಿಗೆ ಬೇಕಿಲ್ಲ ಎಂದರು.
ಸೌಜನ್ಯ ಪ್ರಕರಣದಲ್ಲಿ ಈಗಾಗಲೇ ಸಿಬಿಐ ತನಿಖೆಯಾಗಿ ದೋಷಾರೋಪಣಾ ವರದಿ ಸಲ್ಲಿಕೆಯಾಗಿ, ನ್ಯಾಯಾಲಯವು ತೀರ್ಪು ನೀಡಿದೆ. ಅದು ಮುಗಿದಿದೆ. ಆದರೂ ಬಿಜೆಪಿಯವರು ಸೌಜನ್ಯ ಮನೆಗೆ ಭೇಟಿ ನೀಡಿ ಅನುಕಂಪ ವ್ಯಕ್ತ ಪಡಿಸುವ ಮೂಲಕ ವಿವಾದವನ್ನು ಕೆಣಕುತ್ತಿದ್ದಾರೆ. ಸೌಜನ್ಯ ಪ್ರಕರಣ ಸಂಸ್ಥೆಯ ವಿರುದ್ಧವಿದೆ ಎಂದು ಹೇಳಿದರು.
ಎಸ್ಐಟಿ ತನಿಖೆ ಮುಕ್ತಾಯದ ಹಂತದಲ್ಲಿದೆ. ಈಗ ಎನ್ಐಎ, ಸಿಬಿಐ ತನಿಖೆಗಳಾಗಬೇಕು ಎಂದು ಹೇಳುವ ಮೂಲಕ ಬಿಜೆಪಿ ಮತ್ತಷ್ಟು ಗೊಂದಲ ಮೂಡಿಸುತ್ತದೆ. ಎಸ್ಐಟಿ ತನಿಖೆಯನ್ನು ಧರ್ಮಸ್ಥಳದ ಖಾವಂದರಾದ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಅವರು ತುಂಬಾ ಒಳ್ಳೆಯವರು, ತಿಳುವಳಿಕೆ ಹೊಂದಿರುವವರು. ಬಿಜೆಪಿಯವರಿಗೆ ತಿಳುವಳಿಕೆ ಇಲ್ಲ ಎಂದು ಮೊಯ್ಲಿ ಕಿಡಿಕಾರಿದರು.
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…