veerappa moily
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ. ಅದಕ್ಕಾಗಿ ಪದೇಪದೇ ಕೆಲ ವಿಚಾರಗಳನ್ನು ಕೆಣಕುತ್ತಿದ್ದಾರೆ ಎಂದು ಟೀಕಿಸಿದರು.
ನೀರಿನಲ್ಲಿ ಮುಳುಗುವ ಮನುಷ್ಯನಿಗೆ ಒಂದು ಹುಲ್ಲು ಕಡ್ಡಿಯೂ ಆಶ್ರಯವಾಗುತ್ತದೆ. ಅದೇ ರೀತಿ ಬಿಜೆಪಿಯವರಿಗೆ ಈಗ ಧರ್ಮಸ್ಥಳದ ವಿವಾದ ಬೇಕಾಗಿದೆ. ಅದು ಪೂರ್ಣ ಇತ್ಯರ್ಥಗೊಳ್ಳುವುದು ಬಿಜೆಪಿಗೆ ಬೇಕಿಲ್ಲ ಎಂದರು.
ಸೌಜನ್ಯ ಪ್ರಕರಣದಲ್ಲಿ ಈಗಾಗಲೇ ಸಿಬಿಐ ತನಿಖೆಯಾಗಿ ದೋಷಾರೋಪಣಾ ವರದಿ ಸಲ್ಲಿಕೆಯಾಗಿ, ನ್ಯಾಯಾಲಯವು ತೀರ್ಪು ನೀಡಿದೆ. ಅದು ಮುಗಿದಿದೆ. ಆದರೂ ಬಿಜೆಪಿಯವರು ಸೌಜನ್ಯ ಮನೆಗೆ ಭೇಟಿ ನೀಡಿ ಅನುಕಂಪ ವ್ಯಕ್ತ ಪಡಿಸುವ ಮೂಲಕ ವಿವಾದವನ್ನು ಕೆಣಕುತ್ತಿದ್ದಾರೆ. ಸೌಜನ್ಯ ಪ್ರಕರಣ ಸಂಸ್ಥೆಯ ವಿರುದ್ಧವಿದೆ ಎಂದು ಹೇಳಿದರು.
ಎಸ್ಐಟಿ ತನಿಖೆ ಮುಕ್ತಾಯದ ಹಂತದಲ್ಲಿದೆ. ಈಗ ಎನ್ಐಎ, ಸಿಬಿಐ ತನಿಖೆಗಳಾಗಬೇಕು ಎಂದು ಹೇಳುವ ಮೂಲಕ ಬಿಜೆಪಿ ಮತ್ತಷ್ಟು ಗೊಂದಲ ಮೂಡಿಸುತ್ತದೆ. ಎಸ್ಐಟಿ ತನಿಖೆಯನ್ನು ಧರ್ಮಸ್ಥಳದ ಖಾವಂದರಾದ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಅವರು ತುಂಬಾ ಒಳ್ಳೆಯವರು, ತಿಳುವಳಿಕೆ ಹೊಂದಿರುವವರು. ಬಿಜೆಪಿಯವರಿಗೆ ತಿಳುವಳಿಕೆ ಇಲ್ಲ ಎಂದು ಮೊಯ್ಲಿ ಕಿಡಿಕಾರಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…